Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಹನಗಳಿಗೆ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ | ಚಿತ್ರದುರ್ಗದಲ್ಲಿ ಚಾಲಕರು ಮತ್ತು ಮಾಲೀಕರುಗಳಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 23 : ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆಯು ಪ್ರವಾಸಿ ವಾಹನಗಳಿಗೆ ಜಿ.ಪಿ.ಎಸ್. ಮತ್ತು ಪ್ಯಾನಿಕ್ ಬಟನ್ ಅಳವಡಿಸಲು ಹೊರಟಿರುವುದರ ವಿರುದ್ದ ಜಿಲ್ಲೆಯ ಖಾಸಗಿ ಬಸ್, ಲೈಸ್ ಸರ್ವಿಸ್ ಬಸ್ ಮಾಲೀಕರ ಸಂಘ, ಮಿನಿ ಲಾರಿ ಸಂಘ ಹಾಗೂ ಅಪ್ಪು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘ, ಲಘು ವಾಹನ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಅವೈಜ್ಞಾನಿಕವಾದ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆಯಿಂದ ರಾಜ್ಯದ ಎಲ್ಲಾ ಸಾರಿಗೆ ಕಚೇರಿಗಳಲ್ಲಿ ಹದಿಮೂರು ಸಾವಿರದಿಂದ ಹದಿನೈದು ಸಾವಿರ ರೂ.ಗಳವರೆಗೆ ವಸೂಲಿ ಮಾಡುತ್ತಿದ್ದು, ಪ್ರವಾಸಿ ವಾಹನಗಳ ಚಾಲಕರು ಮತ್ತು ಮಾಲೀಕರುಗಳಿಗೆ ಹೊರೆಯಾಗಿದೆ. 2024 ಸೆಪ್ಟಂಬರ್‍ವರೆಗೆ ಯಾವುದೇ ವಾಹನಗಳಿಗೆ
ಜಿಪಿಎಸ್. ಮತ್ತು ಪ್ಯಾನಿಕ್ ಬಟನ್‍ಗಳನ್ನು ಅಳವಡಿಸದೆ ವಾಹನಗಳಿಗೆ ಎಫ್.ಸಿ. ನೀಡಬಹುದೆಂದು ರಾಜ್ಯ ಸಾರಿಗೆ ಸಚಿವರು ಆದೇಶ ಹೊರಡಿಸಿದ್ದರೂ ಸಾರಿಗೆ
ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಎಲ್ಲಾ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರು ಮತ್ತು ಮಾಲೀಕರುಗಳು ಹೈರಾಣಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೆ ಈ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.

ರಾಜ್ಯ ಗೌರವಾಧ್ಯಕ್ಷ ಇಕ್ಬಾಲ್ ಬಿ.ಸಿ.ರೋಡ್, ಪ್ರಧಾನ ಕಾರ್ಯದರ್ಶಿ ಆರೀಫ್ ಉಜಿರೆ, ಶರತ್‍ಕುಮಾರ್, ದಿನೇಶ್, ನರಹರಿ ಸೇರಿದಂತೆ ನೂರಾರು ಚಾಲಕರು ಮತ್ತು ಮಾಲೀಕರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment