Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ : ಯಾವೆಲ್ಲಾ ರೈತರಿಗೆ ಲಾಭ..?

Facebook
Twitter
Telegram
WhatsApp

ಬೆಂಗಳೂರು: ಇಂದು ವಿಧಾನಸಭೆಯ ಅಧಿವೇಶನದಲ್ಲಿ ನೀರಾವರಿ ಯೋಜನೆಯ ವಿಧೇಯಕಕ್ಕೆ ಅನುಮೋದನೆ ಸಿಕ್ಕಿದೆ. ನೀರಾವರಿ ಸಚಿವ ಡಿಕೆ ಶಿವಕುಮಾರ್ ಯೋಜನೆಯನ್ನು ಮಂಡಿಸಿ, ಅನುಮೋದನೆ ಪಡೆದುಕೊಂಡಿದ್ದಾರೆ. ಇದರಿಂದ ಕಾಲುವೆಗಳ ಕೊನೆ ಭಾಗದ ರೈತರಿಗೂ ನೀರು ಸಿಗಲಿದೆ.

ನೀರಾವರಿ ಕಾಲುವೆಗಳಿಂದ ಪಂಪ್ ಹಾಕಿ ನೀರು ಎತ್ತುತ್ತಿದ್ದರಿಂದ ಕೊನೆ ಭಾಗದ ರೈತರಿಗೆ ನೀರು ಸಿಗುವುದೇ ಕಷ್ಟ ಸಾಧ್ಯವಾಗಿತ್ತು. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಅಧಿವೇಶನದಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಬಿಲ್ ತರುತ್ತೇವೆ. ಎಲ್ಲರ ಜೊತೆಗೆ ಚರ್ಚೆ ನಡೆಸಿ ಮಂಡಿಸುತ್ತೇವೆ ಎಂದು ಹೇಳಿದ್ದರು. ಅದರಂತೆ ಇಂದು ಅನುಮೋದನೆ ಪಡೆದಿದ್ದಾರೆ.

1964ರಲ್ಲಿ ಈ ಬಗ್ಗೆ ಕಾಯ್ದೆ ಮಾಡಲಾಗಿತ್ತು. ನಂತರ ಯಾವುದೇ ತಿದ್ದುಪಡಿ ಆಗಿರಲಿಲ್ಲ. ಕಾಲುವೆಗಳಿಗೆ ಯಾರೂ ಪಂಪ್ ಸೆಟ್ ಹಾಕಿ ನೀರು ತೆಗೆಯಬಾರದು. ಅಕ್ಕಪಕ್ಕದ ರೈತರು ನೀರು ತೆಗೆಯುವುದಕ್ಕೆ ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು. ನೀರಾವರಿ ವಿಚಾರದಲ್ಲಿ ನಡೆಯುವ ಅಕ್ರಮಗಳ ವಿಚಾರದಲ್ಲಿ ತೀರ್ಮಾನ ತೆಗೆದುಕೊಳ್ಳಲು ಸೂಪರಿಡೆಂಟ್ ಇಂಜಿನಿಯರಿಂಗ್ ಗಳಿಗೆ ಅಧಿಕಾರ ನೀಡಲಾಗಿದೆ. ಪ್ರತಿಪಕ್ಷಗಳ ಶಾಸಕರ ತೀರ್ಮಾನವನ್ನು ಸ್ವೀಕರಿಸಲಾಗಿದೆ. ರೈತರಿಗೆ ನೀರು ಕೊಡುವ ನಾಲೆಗಳ ರಕ್ಷಣೆಗಾಗಿ ಈ ಕಾನೂನು ತರಲಾಗಿದೆ ಎಂದಿದ್ದಾರೆ.

ಮಂಡ್ಯ, ಹಾಸನ, ಬಾಗಲಕೋಟೆ ಸೇರಿದಂತೆ ರಾಜ್ಯದ ನೀರಾವರಿ ಪ್ರದೇಶಗಳ ಟೇಲ್ ಎಂಡ್ ಭಾಗಗಳಿಗೆ ನೀರು ತಲುಪುತ್ತಿಲ್ಲ. ಏತ ನೀರಾವರಿ ಮಾಡಿದರು ಶೇಕಡ 50ರಷ್ಟು ಸಹ ನೀರು ಹೋಗುತ್ತಿಲ್ಲ. ಎಲ್ಲರೂ ಸಹಕಾರ ನೀಡಿದರೆ ನಾವೂ ಯೋಜನೆ ಮಾಡಿ ಕೊನೆಯ ಭಾಗದ ರೈತರಿಗೂ ನೀರು ತಲುಪುವಂತೆ ಮಾಡುತ್ತೇವೆ ಎಂದು ನೀರಾವರಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದರು. ಇಂದು ಆ ಯೋಜನೆಗೆ ಬಿಲ್ ಪಾಸ್ ಮಾಡಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!