Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು ಪೊಲೀಸರಿಂದ ಖತರ್ನಾಕ್ ಕಳ್ಳನ ಬಂಧನ, 1 ಕೆಜಿ ಚಿನ್ನ ಮತ್ತು ನಗದು ವಶ…!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರ್ ರಾಜ್ಯ ಕಳ್ಳನನ್ನು ಹಿರಿಯೂರು ಪೊಲೀಸರು ಬಂಧಿಸಿ 6,90,1000/- ರೂ, ಮೌಲ್ಯದ 01 ಕೆ.ಜಿ 30 ಗ್ರಾಂ ತೂಕದ ಬಂಗಾರದ ಅಭರಣಗಳು ಮತ್ತು

68,000/- ರೂ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ 02 ಮೋಟಾರ್ ಸೈಕಲ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬಳ್ಳಾರಿ ಮೂಲದ ಹನುಮಂತ ಬಂಧಿತ ಆರೋಪಿ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ವಾಸವಾಗಿರುವ ಸುಜಾತ ಎಂಬುವವರ ಮನೆಯಲ್ಲಿದ್ದ 1,32,000 ರೂಪಾಯಿ ಮೌಲ್ಯದ 121 ಗ್ರಾಂ ತೂಕದ ಬಂಗಾರದ
ಆಭರಣಗಳು ಮತ್ತು 1,75,000 ರೂಪಾಯಿ ನಗದು ಹಣ ಕಳ್ಳತನವಾಗಿತ್ತು. ಈ ಕುರಿತು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ
ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಹಿರಿಯೂರು ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರವರಾದ ಶ್ರೀಮತಿ ಚೈತ್ರ ಎಸ್. ರವರ ನೇತೃತ್ವದಲ್ಲಿ ಪಿ.ಐ. ರಾಘವೇಂದ್ರ ಕಾಂಡಿಕೆ, ಹೊಸದುರ್ಗ ಠಾಣೆಯ ಪಿ.ಎಸ್.ಐ ಭೀಮನಗೌಡ ಪಾಟೀಲ, ದೇವೇಂದ್ರಪ್ಪ, ರುದ್ರಮುನಿಸ್ವಾಮಿ, ಸಿದ್ದಲಿಂಗೇಶ್ವರ, ತಿಪ್ಪೇಸ್ವಾಮಿ, ರಾಜಣ್ಣ, ಸುರೇಶನಾಯ್ಕ್, ಜಾಫರ್ ಸಾಧೀಕ್, ನಾಗಣ್ಣ, ಸುದರ್ಶನ್ ಗೌಡ ಹಾಗೂ ಬೆರಳಚ್ಚು ಘಟಕದ ವಿಶ್ವನಾಥ ಪಿ.ಎಸ್.ಐ, ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ರಾಘವೇಂದ್ರ ಮತ್ತು ಸಿಬ್ಬಂದಿಯವರನ್ನೊಳಗೊಂಡ ತಂಡ ಪ್ರಕರಣವನ್ನು ಬೇಧಿಸಿ ಖಚಿತ ಮಾಹಿತಿಯ ಮೇರೆಗೆ  ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆತನ೪ ಬಂಧಿಸುವಲ್ಲಿ ಹಿರಿಯೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ
ಹಾಜರುಪಡಿಸಿದ್ದು, ಆತನು ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಬಂಧಿತ ಆರೋಪಿಯು ಜಿಲ್ಲೆಯ ಹಿರಿಯೂರು ನಗರ ಠಾಣೆಯ 08, ಹಿರಿಯೂರು ಗ್ರಾಮಾಂತರ ಠಾಣೆಯ 05, ಹೊಸದುರ್ಗ ಪೊಲೀಸ್ ಠಾಣೆಯ 02,
ಅಬ್ಬಿನಹೊಳೆ ಠಾಣೆಯ 01,  ಚಿತ್ರದುರ್ಗ ಬಡಾವಣೆ ಠಾಣೆಯ 01 ಪ್ರಕರರಣ ಹಾಗೂ ಬಳ್ಳಾರಿ ಕೌಲ್
ಬಜಾರ್ ಠಾಣೆಯ 01 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಇವುಗಳಲ್ಲಿ 15 ಮನೆ ಕಳ್ಳತನ ಪ್ರಕರಣಗಳು, 03 ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ.

ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡದವರ
ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಸೂಕ್ತ ಬಹುಮಾವನ್ನು ಘೋಷಿಸಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!