Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಪಾರಿವಾಳದ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಬಾಲಕ..!

Facebook
Twitter
Telegram
WhatsApp

ಸುದ್ದಿಒನ್, ಮೊಳಕಾಲ್ಮುರು, ಜುಲೈ. 25 : ವಿದ್ಯುತ್ ಕಂಬಕ್ಕೆ ಸಿಲುಕಿದ್ದ ಪಾರಿವಾಳದ ಪ್ರಾಣ ಉಳಿಸಲು ಹೋಗಿ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೊಳಕಾಲ್ಮುರು ತಾಲೂಕಿನ ಸಂತೇಗುಡ್ಡ ಗ್ರಾಪಂ ವ್ಯಾಪ್ತಿಯ ಹನುಮಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.

ಪಾರಿವಾಳವೊಂದು ಆಕಸ್ಮಿಕವಾಗಿ ವಿದ್ಯುತ್ ಕಂಬದ ಮೇಲಿನ ತಂತಿಗೆ ಸಿಲುಕಿತ್ತು. ಮಳೆಗಾಲ ಬೇರೆ ಆಗಿರುವ ಕಾರಣ ವಿದ್ಯುತ್ ಶಾಕ್ ಪಸರಿಸುತ್ತಿದೆ. ಹೀಗಾಗಿ ತಂತಿ ಮೇಲೆ ಕೂತ ಪಾರಿವಾಳಕ್ಕೂ ಕರೆಂಟ್ ಶಾಕ್ ತಗುಲಿ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ಇದನ್ನು ಕಂಡ ಬಾಲಕ, ಪಾರಿವಾಳವನ್ನು ರಕ್ಷಿಸಲು ಹೋಗಿದ್ದಾನೆ. ಆದರೆ ಈ ವೇಳೆ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ.

12 ವರ್ಷದ ರಾಮಚಂದ್ರ ಸಾವನ್ನಪ್ಪಿದ ಬಾಲಕ. ವಿದ್ಯುತ್ ಕಂಬದ ಮೇಲೇರಿ ಪಾರಿವಾಳವನ್ನು ರಕ್ಷಿಸಲು ಹೋಗಿ ತಾನೇ ಬಲಿಯಾಗಿದ್ದಾನೆ. ತಂತಿಯಲ್ಲಿ ಸಿಲುಕಿದ ಪಾರಿವಾಳವನ್ನು ರಕ್ಷಿಸುವಾಗ ಬಾಲಕನಿಗೆ ವಿದ್ಯುತ್ ಸ್ಪರ್ಶಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಣ್ಣೆದುರಿಗೆ ಮಗನ ಶವ ವಿದ್ಯುತ್ ಕಂಬದ ಮೇಲೆ ನೇತಾಡುತ್ತಿರುವುದನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ, ಪ್ರಾಣ ಕಳೆದುಕೊಳ್ಳುತ್ತಿದ್ದ ಪಕ್ಷಿಯನ್ನು ಉಳಿಸಲು ಹೋಗಿ ತಾನೇ ಪ್ರಾಣ ಕಳೆದುಕೊಂಡ  ಮಾನವೀಯತೆ ಮೆರೆದು ಸಾವನ್ನಪ್ಪಿರುವ 6ನೇ ತರಗತಿ ಓದುತ್ತಿದ್ದ ರಾಮಚಂದ್ರನ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿದಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!