Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಡಿಒ ಅಮಾನತು ಮಾಡಿ : ಕರುನಾಡ ವಿಜಯಸೇನೆ ಆಗ್ರಹ…!

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.25  : ಹಣ ದುರುಪಯೋಗ, ಕರ್ತವ್ಯದಲ್ಲಿ ಲೋಪವೆಸಗುತ್ತಿರುವ ಭರಮಸಾಗರ ಗ್ರಾಮ ಪಂಚಾಯಿತಿ ಪಿ.ಡಿ.ಓ. ಶ್ರೀಮತಿ ಕೆ.ಎಸ್.ಶ್ರೀದೇವಿ ಇವರನ್ನು ಕೂಡಲೆ ಸೇವೆಯಿಂದ ಅಮಾನತ್ತುಗೊಳಿಸುವಂತೆ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಪಂಚಾಯಿತಿಯ ಹಣ ದುರುಪಯೋಗಪಡಿಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡುತ್ತಿರುವ ಪಿ.ಡಿ.ಓ. ಶ್ರೀದೇವಿ ಇ.ಸ್ವತ್ತುಗಳಿಗೆ ರಸೀದಿ ನೀಡದೆ ಹಣವನ್ನು ಗುಳುಂ ಮಾಡುತ್ತಿದ್ದು, ಬೋಗಸ್ ಬಿಲ್ಲುಗಳ ಮೂಲಕ ಹಣ ಲೂಟಿ ಹೊಡೆಯುತ್ತಿದ್ದಾರೆಂದು ಪ್ರತಿಭಟನಾಕಾರರು ದೂರಿದರು.

ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಮ ಪಂಚಾಯಿತಿಯಲ್ಲಿಯೂ ಇದೆ ರೀತಿ ಹಣ ದುರುಪಯೋಗಪಡಿಸಿಕೊಂಡಿರುವ ಪಿ.ಡಿ.ಓ. ಕೆ.ಎಸ್.ಶ್ರೀದೇವಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ. ಇಷ್ಟಾದರೂ ಇನ್ನು ಇವರ ಮೇಲೆ ಯಾವ ಕ್ರಮ ಕೈಗೊಳ್ಳದಿರುವುದರ ಹಿಂದಿರುವ ಉದ್ದೇಶವೇನು? ಎಂದು ಪ್ರಶ್ನಿಸಿದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಕ್ಷಣವೇ ಸೇವೆಯಿಂದ ಅಮಾನತ್ತುಗೊಳಿಸದಿದ್ದರೆ ಇದೇ ತಿಂಗಳ 29 ರಂದು ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷರುಗಳಾದ ರತ್ನಮ್ಮ, ಮುಜಾಹಿದ್,  ರಾಜ್ಯ ಸಮಿತಿ ಸದಸ್ಯ ನಿಸಾರ್ ಅಹಮದ್, ಅವಿನಾಶ್, ಸುರೇಶ್, ಪಿ.ಆರ್.ಹರೀಶ್‌ಕುಮಾರ್, ಸಿ.ಜಗದೀಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!