Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ದರ್ಶನ್ ಅರ್ಜಿ ವಿಚಾರಣೆ : ಮನೆ ಊಟದ ವಿಚಾರಕ್ಕೆ ಕೋರ್ಟ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ನಟ ದರ್ಶನ್ ಅವರಿಗೆ ಇಂದು ಕೂಡ ಹಿನ್ನಡೆಯಾಗಿದೆ. ಕೋರ್ಟ್ ದರ್ಶನ್ ಅವರ ಮನವಿಯನ್ನು ತಿರಸ್ಕಾರ ಮಾಡಿದೆ. ಮನೆಯ ಊಟ, ಹಾಸಿಗೆ ಯಾವುದಕ್ಕೂ ಅನುಮತಿ ನೀಡಿಲ್ಲ. ಮನೆ ಊಟ, ಹಾಸಿಗೆ ನೀಡುವ ಬಗ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಜೈಲೂಟದಿಂದ ದರ್ಶನ್ ಅವರಿಗೆ ಅತಿಸಾರ ಬೇಧಿ, ವಾಂತಿ ಆಗಿದೆ ಎಂದು ಕೋರ್ಟ್ ನಲ್ಲಿ ಮನೆಯ ಊಟ ಹಾಗೂ ಹಾಸಿಗೆಗಾಗಿ ಅನುಮತಿ ಕೋರಿದ್ದರು. ಇಂದು 24ನೇ ಎಸಿಎಂಎಂ ಕೋರ್ಟ್ ನಲ್ಲಿ ಈ ಸಂಬಂಧ ಅರ್ಜಿ ವಿಚಾರಣೆ ನಡೆದಿತ್ತು. ಜೈಲಿನ ಅಧಿನಿಯಮ ಪ್ರಶ್ನಿಸಿ ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಪೊಲೀಸರ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದರು. ಜೈಲೂಟದಿಂದ ದರ್ಶನ್ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ಸಮಯದಲ್ಲಿ ಆದಂತ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಾಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಆಕ್ಷೇಪಣೆ ಸಲ್ಲಿಸಿದ್ದರು.

ಎರಡು ಕಡೆಯಲ್ಲಿ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ.ಗೌಡರ್, ಆದೇಶ ನೀಡಿದ್ದಾರೆ. ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ ಪಡೆಯುವ ಅವಕಾಶವಿಲ್ಲ. ಜೈಲು ನಿಯಾಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ ಪಡೆಯುವ ಅವಕಾಶವಿಲ್ಲ. ಹೀಗಾಗಿ ದರ್ಶನ್ ಕೊಲೆ ಆರೋಪಿ ಆಗಿರುವ ಕಾರಣ ಈ ಅವಕಾಶವನ್ನು ಕೊಡಲಾಗುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 29ಕ್ಕೆ ನಿಗದಿಯಾಗಿದೆ. ದರ್ಶನ್ ಗೆ ಮನೆಯ ಊಟದ ವ್ಯವಸ್ಥೆಯ ಸೌಲಭ್ಯ ಬೇಕಿದ್ದರೆ ಹೈಕೋರ್ಟ್ ಮೊರೆ ಹೋಗಬೇಕಿದೆ. ಅವರ ಪರ ವಕೀಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!