Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ದರ್ಶನ್ ಅರ್ಜಿ ವಿಚಾರಣೆ : ಮನೆ ಊಟದ ವಿಚಾರಕ್ಕೆ ಕೋರ್ಟ್ ಹೇಳಿದ್ದೇನು..?

---Advertisement---

ಬೆಂಗಳೂರು: ನಟ ದರ್ಶನ್ ಅವರಿಗೆ ಇಂದು ಕೂಡ ಹಿನ್ನಡೆಯಾಗಿದೆ. ಕೋರ್ಟ್ ದರ್ಶನ್ ಅವರ ಮನವಿಯನ್ನು ತಿರಸ್ಕಾರ ಮಾಡಿದೆ. ಮನೆಯ ಊಟ, ಹಾಸಿಗೆ ಯಾವುದಕ್ಕೂ ಅನುಮತಿ ನೀಡಿಲ್ಲ. ಮನೆ ಊಟ, ಹಾಸಿಗೆ ನೀಡುವ ಬಗ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಜೈಲೂಟದಿಂದ ದರ್ಶನ್ ಅವರಿಗೆ ಅತಿಸಾರ ಬೇಧಿ, ವಾಂತಿ ಆಗಿದೆ ಎಂದು ಕೋರ್ಟ್ ನಲ್ಲಿ ಮನೆಯ ಊಟ ಹಾಗೂ ಹಾಸಿಗೆಗಾಗಿ ಅನುಮತಿ ಕೋರಿದ್ದರು. ಇಂದು 24ನೇ ಎಸಿಎಂಎಂ ಕೋರ್ಟ್ ನಲ್ಲಿ ಈ ಸಂಬಂಧ ಅರ್ಜಿ ವಿಚಾರಣೆ ನಡೆದಿತ್ತು. ಜೈಲಿನ ಅಧಿನಿಯಮ ಪ್ರಶ್ನಿಸಿ ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಪೊಲೀಸರ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದರು. ಜೈಲೂಟದಿಂದ ದರ್ಶನ್ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ಸಮಯದಲ್ಲಿ ಆದಂತ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಾಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಆಕ್ಷೇಪಣೆ ಸಲ್ಲಿಸಿದ್ದರು.

ಎರಡು ಕಡೆಯಲ್ಲಿ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ.ಗೌಡರ್, ಆದೇಶ ನೀಡಿದ್ದಾರೆ. ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ ಪಡೆಯುವ ಅವಕಾಶವಿಲ್ಲ. ಜೈಲು ನಿಯಾಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ ಪಡೆಯುವ ಅವಕಾಶವಿಲ್ಲ. ಹೀಗಾಗಿ ದರ್ಶನ್ ಕೊಲೆ ಆರೋಪಿ ಆಗಿರುವ ಕಾರಣ ಈ ಅವಕಾಶವನ್ನು ಕೊಡಲಾಗುವುದಿಲ್ಲ ಎಂದು ಆದೇಶ ನೀಡಿದ್ದಾರೆ.

ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಜುಲೈ 29ಕ್ಕೆ ನಿಗದಿಯಾಗಿದೆ. ದರ್ಶನ್ ಗೆ ಮನೆಯ ಊಟದ ವ್ಯವಸ್ಥೆಯ ಸೌಲಭ್ಯ ಬೇಕಿದ್ದರೆ ಹೈಕೋರ್ಟ್ ಮೊರೆ ಹೋಗಬೇಕಿದೆ. ಅವರ ಪರ ವಕೀಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment