Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಬಜೆಟ್ ಬೆನ್ನಲ್ಲೇ ಚಿನ್ನದ ದರ ಇಳಿಕೆ : ಎಷ್ಟು ಕಡಿಮೆ ಆಯ್ತು..?

Facebook
Twitter
Telegram
WhatsApp

ಚಿನ್ನದ ಬೆಲೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು. ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ಎನಿಸಿತ್ತು. ಚಿನ್ನ ಕೊಳ್ಳಬೇಕೆಂದುಕೊಂಡವರು ಯೋಚನೆ ಮಾಡಬೇಕಾಗಿತ್ತು. ಆದರೆ ಕೇಂದ್ರ ಬಜೆಟ್ ಮಂಡನೆಯ ಬೆನ್ನಲ್ಲೇ ಕೊಂಚ ಬೆಲೆ ಇಳಿಕೆಯಾಗಿದೆ. ಹಾಗಂತ ದೊಡ್ಡ ಮಟ್ಟದ ಬೆಲೆ ಏನು ಇಳಿಕೆಯಾಗಿಲ್ಲದೆ ಇರಬಹುದು. ಆದರೆ ಕೊಂಚ ಕಡಿಮೆಯಾಗಿರುವುದು ಚಿನ್ನ ಪ್ರಿಯರಿಗೆ ನಿರಾಳ ಎನಿಸಿದೆ.

ಇಂದಿನ ಚಿನ್ನದ ಬೆಲೆಯಲ್ಲಿ ಇಳಿಕೆ ಪ್ರಮಾಣ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಗ್ರಾಂಗೆ 95 ರೂಪಾಯಿ ಹಾಗೂ 24 ಕ್ಯಾರೆಟ್ ಗೆ ಚಿನ್ನದ ಬೆಲೆಯಲ್ಲಿ 104 ರೂಪಾಯಿ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂಗೆ 6,400 ರೂಪಾಯಿ ಆಗಿದೆ. ಹತ್ತು ಗ್ರಾಂಗೆ 64,000 ಸಾವಿರ ರೂಪಾಯಿ ಆಗಿದೆ.

ಬೆಳ್ಳಿ ದರದಲ್ಲಿಯೂ ಕಡಿಮೆಯಾಗಿದ್ದು, ಒಂದು ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ. ಈ ಮೂಲಕ ಚಿನ್ನ ಬೆಳ್ಳಿ ದರದಲ್ಲಿ ಸಾಕಷ್ಟು ಬೆಲೆ ಕಡಿಮೆಯಾಗಿದೆ. ಚಿನ್ನ ಬೆಳ್ಳಿ ಖರೀದಿ‌ ಮಾಡಬೇಕೆಂದುಕೊಂಡವರಿಗೆ ಸಂತಸ ತಂದಿದೆ. ಸದ್ಯ ಕೇಂದ್ರ ಸರ್ಕಾರದಿಂದ ಬಜೆಟ್ ಮಂಡನೆಯಲ್ಲಿ ಚಿನ್ನದ ಮೇಲಿನ ಸುಂಕ ಕಡಿಮೆ ಮಾಡಿದ್ದು, ಇಂದಿನಿಂದಾನೇ ಜಾರಿಗೆ ಬಂದಿದೆ. ಚಿನ್ನ ತೆಗೆದುಕೊಳ್ಳಬೇಕು ಎಂದುಕೊಂಡವರು, ಅದಕ್ಕಾಗಿ ಚೀಟಿ ಹಾಕುತ್ತಿದ್ದವರಿಗೆ ಕೊಂಚ ಚಿನ್ನ ಹೆಚ್ಚಿನ ಗ್ರಾಂ ಸಿಗಲಿದೆ.

ಸದ್ಯ 22 ಕ್ಯಾರೆಟ್ ಚಿನ್ನ ದೆಹಲಿಯಲ್ಲಿ ಒಂದು ಗ್ರಾಂಗೆ 6,415 ರೂಪಾಯಿ ಇದೆ. 24 ಕ್ಯಾರೆಟ್ 6,995 ರೂಪಾಯಿ ಇದೆ. ಮುಂಬೈನಲ್ಲಿ 6,400 ರೂಪಾಯಿ ಇದೆ. ಚೆನ್ನೈನಲ್ಲಿ 6,430 ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!