Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಬಜೆಟ್ ಬೆನ್ನಲ್ಲೇ ಚಿನ್ನದ ದರ ಇಳಿಕೆ : ಎಷ್ಟು ಕಡಿಮೆ ಆಯ್ತು..?

---Advertisement---

ಚಿನ್ನದ ಬೆಲೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು. ಚಿನ್ನ ಪ್ರಿಯರಿಗೆ ಇದು ಶಾಕಿಂಗ್ ಎನಿಸಿತ್ತು. ಚಿನ್ನ ಕೊಳ್ಳಬೇಕೆಂದುಕೊಂಡವರು ಯೋಚನೆ ಮಾಡಬೇಕಾಗಿತ್ತು. ಆದರೆ ಕೇಂದ್ರ ಬಜೆಟ್ ಮಂಡನೆಯ ಬೆನ್ನಲ್ಲೇ ಕೊಂಚ ಬೆಲೆ ಇಳಿಕೆಯಾಗಿದೆ. ಹಾಗಂತ ದೊಡ್ಡ ಮಟ್ಟದ ಬೆಲೆ ಏನು ಇಳಿಕೆಯಾಗಿಲ್ಲದೆ ಇರಬಹುದು. ಆದರೆ ಕೊಂಚ ಕಡಿಮೆಯಾಗಿರುವುದು ಚಿನ್ನ ಪ್ರಿಯರಿಗೆ ನಿರಾಳ ಎನಿಸಿದೆ.

ಇಂದಿನ ಚಿನ್ನದ ಬೆಲೆಯಲ್ಲಿ ಇಳಿಕೆ ಪ್ರಮಾಣ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಗ್ರಾಂಗೆ 95 ರೂಪಾಯಿ ಹಾಗೂ 24 ಕ್ಯಾರೆಟ್ ಗೆ ಚಿನ್ನದ ಬೆಲೆಯಲ್ಲಿ 104 ರೂಪಾಯಿ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂಗೆ 6,400 ರೂಪಾಯಿ ಆಗಿದೆ. ಹತ್ತು ಗ್ರಾಂಗೆ 64,000 ಸಾವಿರ ರೂಪಾಯಿ ಆಗಿದೆ.

ಬೆಳ್ಳಿ ದರದಲ್ಲಿಯೂ ಕಡಿಮೆಯಾಗಿದ್ದು, ಒಂದು ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ. ಈ ಮೂಲಕ ಚಿನ್ನ ಬೆಳ್ಳಿ ದರದಲ್ಲಿ ಸಾಕಷ್ಟು ಬೆಲೆ ಕಡಿಮೆಯಾಗಿದೆ. ಚಿನ್ನ ಬೆಳ್ಳಿ ಖರೀದಿ‌ ಮಾಡಬೇಕೆಂದುಕೊಂಡವರಿಗೆ ಸಂತಸ ತಂದಿದೆ. ಸದ್ಯ ಕೇಂದ್ರ ಸರ್ಕಾರದಿಂದ ಬಜೆಟ್ ಮಂಡನೆಯಲ್ಲಿ ಚಿನ್ನದ ಮೇಲಿನ ಸುಂಕ ಕಡಿಮೆ ಮಾಡಿದ್ದು, ಇಂದಿನಿಂದಾನೇ ಜಾರಿಗೆ ಬಂದಿದೆ. ಚಿನ್ನ ತೆಗೆದುಕೊಳ್ಳಬೇಕು ಎಂದುಕೊಂಡವರು, ಅದಕ್ಕಾಗಿ ಚೀಟಿ ಹಾಕುತ್ತಿದ್ದವರಿಗೆ ಕೊಂಚ ಚಿನ್ನ ಹೆಚ್ಚಿನ ಗ್ರಾಂ ಸಿಗಲಿದೆ.

ಸದ್ಯ 22 ಕ್ಯಾರೆಟ್ ಚಿನ್ನ ದೆಹಲಿಯಲ್ಲಿ ಒಂದು ಗ್ರಾಂಗೆ 6,415 ರೂಪಾಯಿ ಇದೆ. 24 ಕ್ಯಾರೆಟ್ 6,995 ರೂಪಾಯಿ ಇದೆ. ಮುಂಬೈನಲ್ಲಿ 6,400 ರೂಪಾಯಿ ಇದೆ. ಚೆನ್ನೈನಲ್ಲಿ 6,430 ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment