Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಗುರು ಪೂರ್ಣಿಮಾ ಆಚರಣೆಯಂದು ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಸಂಗ್ರಹವಾದ ದೇಣಿಗೆ ಹಣ ಎಷ್ಟು ಕೋಟಿ ಗೊತ್ತಾ ? ತಿರುಪತಿ ತಿಮ್ಮಪ್ಪನ ಆದಾಯಕ್ಕಿಂತಲೂ ಹೆಚ್ಚು…!  

---Advertisement---

ಸುದ್ದಿಒನ್, ಜುಲೈ. 25 : ತಿರುಮಲ ತಿರುಪತಿ ದೇವಸ್ಥಾನವು ವಿಶ್ವದ ಅತ್ಯಂತ ಶ್ರೀಮಂತ ದೇವಾಲಯವಾಗಿದೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದ ಶಿರಡಿ ದೇವಾಲಯ. ಆದರೆ ಈಗ ತಿರುಪತಿ ತಿಮ್ಮಪ್ಪನ ಆದಾಯಕ್ಕೆ ಶಿರಡಿ ಸಾಯಿಬಾಬಾ ಮಂದಿರ ಪೈಪೋಟಿ ನೀಡುತ್ತಿದೆ.

ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೌರ್ಣಮಿ ಎಂದು ಆಚರಿಸಲಾಗುತ್ತದೆ. ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಇದೇ 20ರಂದು ಆರಂಭವಾದ ಗುರು ಪೌರ್ಣಮಿ ಮಹೋತ್ಸವ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಿತು. ಭಕ್ತರು ಸಾಯಿಬಾಬಾಗೆ  ಕಾಣಿಕೆಯಾಗಿ ನೀಡಿದ ಹಣದ ಮೊತ್ತ 6 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ ಎಂದು ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ ಸಿಇಒ ಗೋರಕ್ಷಾ ಗಾಡಿಲ್ಕರ್ ತಿಳಿಸಿದ್ದಾರೆ. ಗುರು ಪೌರ್ಣಮಿಯ ದಿನದಂದು ಸಾಯಿಬಾಬಾ ಮಂದಿರಕ್ಕೆ ಸುಮಾರು 2 ಲಕ್ಷ ಜನರು ಬಂದು ದರ್ಶನ ಪಡೆದಿದ್ದಾರೆ ಎನ್ನಲಾಗಿದೆ.

ಗುರುಪೂರ್ಣಿಮೆ ನಿಮಿತ್ತ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ನಗದು ರೂಪದಲ್ಲಿ 2 ಕೋಟಿ 50 ಲಕ್ಷ ರೂಪಾಯಿಗಳು,  ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು, ಸೇರಿದಂತೆ ಆನ್‌ಲೈನ್‌ನಲ್ಲಿ 1 ಕೋಟಿಗೂ ಹೆಚ್ಚು ದೇಣಿಗೆ,  ಚೆಕ್‌ಗಳು, ಮನಿ ಆರ್ಡರ್‌ಗಳ ರೂಪದಲ್ಲಿ ಸುಮಾರು 2 ಕೋಟಿಗೂ ಹೆಚ್ಚು ದೇಣಿಗೆ ಬಂದಿದೆ. ಹಾಗೂ ಇನ್ನು ಕೆಲವು ಭಕ್ತರು ಚಿನ್ನ ಬೆಳ್ಳಿ ಕಾಣಿಕೆ ನೀಡಿದ್ದಾರೆ. ಇವುಗಳ ಮೌಲ್ಯ 10 ಲಕ್ಷ ರೂಪಾಯಿ ಆಗಲಿದೆ ಎಂದು ತಿಳಿದುಬಂದಿದೆ. ಸಾಯಿಬಾಬಾರವರ ವಿಶೇಷ ದರ್ಶನಕ್ಕೆ ರೂ. 200 ಟಿಕೆಟ್ ನೀಡಿದ್ದು, ಲಡ್ಡು ಮಾರಾಟದ ಮೂಲಕ 62 ಲಕ್ಷ ರೂಪಾಯಿಗೂ ಹೆಚ್ಚು ಆದಾಯ ಗಳಿಸಿರುವುದು ತಿಳಿದು ಬಂದಿದೆ. ಸಾಯಿಬಾಬಾ ಪ್ರಸಾದ ನಿಲಯದಲ್ಲಿ 1 ಲಕ್ಷ 90 ಸಾವಿರ ಭಕ್ತರು ಪ್ರಸಾದ ಸ್ವೀಕರಿಸಿದ್ದಾರೆ.

ಗುರು ಪೌರ್ಣಮಿ ಆಚರಣೆಯ ಮೂರು ದಿನಗಳ ಕಾಲ ಶಿರಸಿ ಪಟ್ಟಣವು ಭಕ್ತರಿಂದ ತುಂಬಿ ತುಳುಕುತ್ತಿತ್ತು. ಜುಲೈ 21 ರಂದು ಜಪಾನ್‌ನಿಂದ 18 ಭಕ್ತರು ಬಾಬಾರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇವರು ಕಳೆದ 10 ವರ್ಷಗಳಿಂದ ಗುರು ಪೌರ್ಣಮಿಯಂದು ಶಿರಡಿ ಸಾಯಿ ದರ್ಶನ ಪಡೆಯುತ್ತಿದ್ದರು. ಶಿರಡಿಗೆ ಭೇಟಿ ನೀಡುವ ಭಕ್ತರಿಗೆ ಮತ್ತಷ್ಟು ಹೆಚ್ಚಿನ ಆನಂದ ನೀಡಲು ಥೀಮ್ ಪಾರ್ಕ್ ಸ್ಥಾಪಿಸಲಾಗುವುದು. ಇದಕ್ಕಾಗಿ ರಾಜ್ಯ ಸರಕಾರ 40 ಕೋಟಿ ರೂಪಾಯಿ ಶಿರಡಿ ನಗರದಲ್ಲಿ 22 ಎಕರೆ ಪ್ರದೇಶದಲ್ಲಿ ಯೋಜನೆ ನಿರ್ಮಾಣವಾಗಲಿದೆ. ಇದರಲ್ಲಿ ಬಾಬಾರವರ ಜೀವನ ಸಾರುವ ಲೇಸರ್ ಶೋ ಏರ್ಪಡಿಸಲಾಗುವುದು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...