Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರೇಮಿಗಳ ನಡುವೆ ಮದುವೆ ವಿಚಾರವೇ ಪ್ರಾಣಕ್ಕೆ ಕುತ್ತು ತಂದೀತಾ..? ಶಿವಮೊಗ್ಗದಲ್ಲೊಂದು ದುರಂತ ಅಂತ್ಯ..!

Facebook
Twitter
Telegram
WhatsApp

ಶಿವಮೊಗ್ಗ: ಅವರಿಬ್ಬರು ಮನಸ್ಸಾರೆ ಒಪ್ಪಿಯೇ ಪ್ರೀತಿ ಮಾಡುತ್ತಿದ್ದರು. ಆದರೆ ಮದುವೆ ಎಂಬ ವಿಚಾರ ಮುಗ್ಧ ಪ್ರೀತಿಯೇ ಅಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಪ್ರಿಯತಮೆ ಸಾವನ್ನಪ್ಪಿದ್ರೆ, ಪ್ರಿಯತಮ ಜೈಲಿಗೆ ಸೇರಿದ್ದಾನೆ.

ಜುಲೈ 2ರಂದು ಯುವತಿಯೊಬ್ಬಳು ನಾಪತ್ತೆಯಾಗಿದ್ದರ ಬಗ್ಗೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವತಿಯ ತಾಯಿಗೆ ಆಕೆ ಲವ್ ಮಾಡುತ್ತಿದ್ದ ಹುಡುಗ ಸೃಜನ್ ಗೆ ಕಾಲ್ ಮಾಡಿ ಮಗಳ ಬಗ್ಗೆ ವಿಚಾರಿಸಿದ್ದರು. ಆದರೆ ಸೃಜನ್, ಮಧ್ಯಾಹ್ನ ಸಿಕ್ಕಿದ್ದಳು. ಬಸ್ ಸ್ಟಾಪ್ ಗೆ ಬಿಟ್ಟು ಬಂದೇ ಅಂತ ಹೇಳಿದ್ದ. ತಾಯಿಯ ದೂರು ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಜುಲೈ 21ರವರೆಗೂ ಪೊಲೀಸರಿಗೆ ಯಾವುದೇ ಸುಳಿವು ಸಿಗುವುದಿಲ್ಲ. ಬಳಿಕ ಸಿಡಿಆರ್ ತೆಗೆಸಿದ ಪೊಲೀಸರಿಗೆ, ಸೃಜನ್ ಬಗ್ಗೆ ಸುಳಿವು ಸಿಗುತ್ತದೆ. ಹೆಚ್ಚು ಸಂಪರ್ಕದಲ್ಲಿ ಇರುವುದು ತಿಳಿದು ವಿಚಾರಣೆ ನಡೆಸಿದಾಗ ಇಬ್ಬರು ಪ್ರೀತಿಸುತ್ತಿದ್ದರು ಎಂಬ ವಿಚಾರ ಬಯಲಾಗಿದೆ. ಆತನಿಂದಾನೂ ಪ್ರೀತಿಸಿದ ಸತ್ಯ ಗೊತ್ತಾಗಿದೆ.

ತನಿಖೆ ಮುಂದುವರೆಸಿದ ಬಳಿಕ ಯುವತಿಯ ಲೊಕೇಶನ್ ಶಿವಮೊಗ್ಗದ ಹೆದ್ದಾರಿಪುರದ ಬಳಿ ಎಂಡ್ ಆಗಿರುತ್ತದೆ. ಸೃಜನ್ ಕಾಲ್ ರೆಕಾರ್ಡ್ ಕೂಡ ಅದನ್ನೇ ತೋರಿಸುತ್ತಿತ್ತು. ಬಳಿಕ ಆತನನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಸೃಜನ್ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಸೃಜನ್ ಹಾಗೂ ಕೊಲೆಯಾದ ಯುವತಿ ಪ್ರೀತಿಸುತ್ತಿದ್ದರು. ಫೈನ್ಯಾನ್ಸ್ ಆಫೀಸಲ್ಲಿ ಸೃಜನ್ ಕೆಲಸ ಮಾಡುತ್ತಿದ್ದ. ಯುವತಿಯ ತಾಯಿಯೂ ಆತನ ಬಳಿ ಸಾಲ ಪಡೆದಿದ್ದಳು. ಸಾಲ ಮರುಪಾವತಿ ವೇಳೆ ಸೃಜನ್ ಗೆ ಯಿವತಿಯ ಪರಿಚಯವಾಗಿ, ಮುಂದೆ ಇಬ್ಬರು ಪ್ರೀತಿಸುವುದಕ್ಕೆ ಶುರು ಮಾಡಿದ್ದರು. ಇತ್ತಿಚೆಗೆ ಯುವತಿ ಮದುವೆ ಆಗಬೇಕೆಂದು ಹಠ ಹಿಡಿದಿದ್ದಳು. ಆದರೆ ಸೃಜನ್ ಈಗಲೇ ಅದು ಸಾಧ್ಯವಿಲ್ಲ, ಜವಾಬ್ದಾರಿ ಇದೆ ಎಂದಿದ್ದ. ಆದರೆ ಹುಡುಗಿ ಹಠದಿಂದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯ ಆಗಿದೆ. ಆನಂದಪುರದ ರೈಲ್ವೆಟ್ರ್ಯಾಕ್‌ ಬಳಿಯ ಚರಂಡಿಗೆ ಶವವನ್ನ ಬಿಸಾಕುತ್ತಾನೆ. ಆ ನಂತರ ಏನೂ ಗೊತ್ತಿಲ್ಲದವನಂತೆ ನಾಟಕ ಆಡುತ್ತಾನೆ. ಬಳಿಕ ಪೊಲೀಸರ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ..

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!