Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ ನಾಪತ್ತೆ : ಪತ್ತೆ ಮಾಡಲು ಬಂದ ಈಶ್ವರ ಯಾರು..?

Facebook
Twitter
Telegram
WhatsApp

 

ಉತ್ತರ ಕನ್ನಡದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆ ಲಾರಿ ಡ್ರೈವರ್ ಅರ್ಜುನ ನಾಪತ್ತೆಯಾಗಿದ್ದರು. ಇಂದಿಗೆ 12 ದಿನ ಕಳೆದರು ಇಲ್ಲಿಯವರೆಗೂ ಅರ್ಜುನ ಪತ್ತೆಯಾಗಿಲ್ಲ. ಆರಂಭದಲ್ಲಿ ಬದುಕಿದ್ದರು ಎಂದೇ ಹೇಳಲಾಗಿತ್ತು. ಆದರೆ ಈಗ ಅವರ ಪತ್ತೆಯಾಗುತ್ತಿಲ್ಲ. ಹೀಗಾಗಿ ಈಶ್ವರನ ಮೊರೆ ಹೋಗಿದ್ದಾರೆ. ಅರ್ಜುನ ಓಡಿಸುತ್ತಿದ್ದ ಲಾರಿಯೇ 20 ಅಡಿ ಆಳದಲ್ಲಿ ಪತ್ತೆಯಾಗಿದೆ. ಹೀಗಾಗಿ ಅರ್ಜುನ್ ನನ್ನು ಹುಡುಕಲು ಕರಾವಳಿಯ ಮುಳುಗು ತಜ್ಞ ಈಶ್ವರ್ ಸಹಾಯ ಪಡೆಯಲಾಗುತ್ತಿದೆ.

 

ಈಶ್ವರ ಅವರ ಸಹಾಯದಿಂದ ಲಾರಿ ಹಾಗೂ ಚಾಲಕ ಅರ್ಜುನ್ ನನ್ನು ಪತ್ತೆ ಮಾಡಬೇಕಿದೆ. ಜಿಲ್ಲಾಡಳಿತದ ಮನವಿ ಮೇರೆಗೆ ಈಶ್ವರ್ ಮಲ್ಪರ ಶಿರೂರಿನ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಈಶ್ವರ್ ಮಲ್ಪೆ ಮೂಲತಃ ಕರಾವಳಿ ಭಾಗದವರು. ಆಂಬುಲೆನ್ಸ್ ಡ್ರೈವರ್ ಆಗಿರುವ ಈಶ್ವರ್ ಸಾಕಷ್ಟು ಜನರ ಪ್ರಾಣ ಉಳಿಸಿದ್ದಾರೆ. ನದಿಯ ಆಳಕ್ಕೆ ಇಳಿದು ನಾಪತ್ತೆಯಾದ ಮೃತದೇಹಗಳನ್ನು ಪತ್ತೆ ಹಚ್ಚುವ ಸಾಹಸಿ ಇವರು.

ಈಶ್ವರ್ ಮಲ್ಪೆ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಅದೆಷ್ಟೇ ಆಳವಿರಲಿ, ಅಪಾಯಕಾರಿ ಸ್ಥಳವಿರಲಿ ಅಲ್ಲಿಗೆ ಇಳಿದು ಮೃತದೇಹಗಳನ್ನು ತೆಗೆದಿದ್ದಾರೆ. ಅಷ್ಡು ದೊಡ್ಡ ಸಾಹಸಮಯಿ ಇವರು. ಎಷ್ಟೋ ಬಾರಿ ಊಟ ಬಡಿಸುವಾಗಲೇ ಕರೆ ಬಂದಿದ್ದರು, ಈಶ್ವರ್ ಮೊದಲು ರಕ್ಷಣೆ ಆಮೇಲೆ ಊಟ ಎನ್ನುತ್ತಾರೆ. ಎಂಥದ್ದೇ ಪರಿಸ್ಥಿತಿ ಇದ್ದರು ಕರೆ ಬಂದ ತಕ್ಷಣ ಓಡಿ ಹೋಗುತ್ತಾರೆ. ಕಳೆದ ವರ್ಷ ಜುಲೈ 23ರಂದು ಅರಿಶಿನ ಗುಂಡಿ ಜಲಪಾತದಲ್ಲಿ ಭದ್ರಾವತಿ ಮೂಲದ ಶರತ್ ಎಂಬಾತ ಕಾಲು ಜಾರಿ ನೀರಿಗೆ ಬೀಳುತ್ತಾನೆ. ಸೌಪರ್ಣಿಕ ನೀರಿನ ಸೆಳೆತಕ್ಕೆ ಆತ ಕೊಚ್ಚಿ ಹೋಗುತ್ತಾನೆ. ಮರದ ದಿಂಬಿಗೆ ಸಿಲುಕಿ ದೇಹ ಅಲ್ಲಿಯೇ ಇರುತ್ತದೆ. ಆರು ದಿನಗಳ ಬಳಿಕ ಆ ಮೃತದೇಹವನ್ನು ಈಶ್ವರ್ ಮಲ್ಪೆ ಅವರೇ ಮೇಲಕ್ಕೆ ಎತ್ತುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!