Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ವನಮಹೋತ್ಸವ ಕಾರ್ಯಕ್ರಮ : ಕಾಡಿನ ರಕ್ಷಣೆ ಕುರಿತು ಜಾಗೃತಿ

Facebook
Twitter
Telegram
WhatsApp

ಸುದ್ದಿಒನ್, ಜುಲೈ. 27 : ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ದಿನೇ ದಿನೇ ಹೆಚ್ಚುತ್ತಿದ್ದು ಹೃದಯ ಸಂಬಂಧಿ ಶ್ವಾಸಕೋಶದ ಸಂಬಂಧಿ ಖಾಯಿಲೆಗಳಿಂದ ಬಳಲುವವರ  ಸಂಖ್ಯೆ ಹೆಚ್ಚಾಗಿದ್ದು ಇದಕ್ಕೆ ಪರಿಹಾರ ನಮ್ಮ ಪರಿಸರದ ಸ್ವಚ್ಚತೆಯ ಜೊತೆಗೆ ಕಾಡನ್ನು ರಕ್ಷಿಸಿ ಬೆಳೆಸವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ವಿದ್ಯಾರ್ಥಿನಿ ಕೀರ್ತನಾ ಎಸ್ ಯು ಹೇಳಿದರು.

ಅವರು ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಶನಿವಾರ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಕಾರ್ಯಕ್ರಮದ ವಿಶೇಷತೆಯ ಕುರಿತು ‘ಕಾಡಿದ್ದರೆ ನಾಡು, ನಾಡಿದ್ದರೆ ನಾವು’ ‘ಗಿಡ ಬೆಳೆಸಿ ಪರಿಸರ ಉಳಿಸಿ ಎಂಬ ವಿಷಯದ ಕುರಿತು ಭಾಚಣ ಮಾಡಿದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಹೆಚ್. ಕೆ.ಎಸ್. ಸ್ವಾಮಿ ಅವರು
‘ಕಸದಿಂದ ರಸ’ ಎಂಬಂತೆ ನಿರುಪಯುಕ್ತ ವಸ್ತುಗಳನ್ನು ಮರುಬಳಕೆ ಮಾಡಲು ತಾವು ತಂದ ಮಾದರಿಗಳನ್ನು ತೋರಿಸುತ್ತಾ ಉತ್ತೇಜಿಸಿದರು. ಗಾಂಧೀಜಿಯವರ ಕನಸಾದ ಸ್ವದೇಶಿ ವಸ್ತುಗಳ ಬಳಕೆ ಹಾಗೂ ಚರಕದ ಉಪಯೋಗದ ಬಗ್ಗೆ ತಿಳಿಸದರು. ಪ್ಲಾಸ್ಟಿಕ್ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದು ತಿಳಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಸಮೃದ್ಧ ಪರಿಸರ ಮತ್ತು ಜಲಸಂರಕ್ಷಣೆಗೆ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಎಸ್.ಎಂ.ಪೃಥ್ವೀಶ ಮುಖ್ಯೋಪಾಧ್ಯಾಯ ತಿಪ್ಪೇಸ್ವಾಮಿ ಎನ್.ಜಿ, ಐಸಿಎಸ್‌ಸಿ  ಪ್ರಾಚಾರ್ಯ ಬಸವರಾಜಯ್ಯ ಪಿ.,  ಉಪಪ್ರಾಚಾರ್ಯ  ಅವಿನಾಶ್.ಬಿ. ಶಿಕ್ಷಕ/ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ ಡಾ.ಹೆಚ್ ಕೆ ಎಸ್ ಸ್ವಾಮಿ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಸುಪ್ರಿತಾ ನಿರೂಪಿಸಿದರು, ನುರೈನ್ ಸ್ವಾಗತಿಸಿ, ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!