Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಳೆಗೆ ಕುಸಿದು ಬಿದ್ದ ಮನೆ : 7 ಮೇಕೆಗಳು ಸಾವು : ಮನೆ ಮಂದಿ ಅದೃಷ್ಟವಶಾತ್ ಪಾರು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜುಲೈ.27 : ತಾಲ್ಲೂಕಿನ ಭೀಮಸಮುದ್ರ ಗ್ರಾಮದ ತುರೆಬೈಲು ಕಾಲೋನಿಯಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಯಪ್ಪ ಎನ್ನುವವರ ಮನೆ ಕುಸಿದಿದ್ದು 7 ಮೇಕೆಗಳು ಮೃತಪಟ್ಟಿವೆ. ಅದೇ ಮನೆಯಲ್ಲಿ ಗಂಡ ಹೆಂಡತಿ ಮಗ ಹಾಗೂ ಮೊಮ್ಮಗ ಮಲಗಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿತ್ರದುರ್ಗ ತಹಶೀಲ್ದಾರ್  ನಾಗವೇಣಿ ಮಾತನಾಡಿ,  ಜಿಲ್ಲೆಯಲ್ಲಿ ಒಂದು ವಾರದಿಂದ ಬಹುತೇಕ ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ಭೀಮಸಮುದ್ರ ಗ್ರಾಮದ ತುರೆಬೈಲು ಕಾಲೋನಿಯಲ್ಲಿ ಜಯಪ್ಪ ಎಂಬುವರ ಮನೆ ಕುಸಿದಿದ್ದು ಸದ್ಯ ಯಾರಿಗೂ ಜೀವ  ಹಾನಿಯಾಗಿಲ್ಲ.  4 ಜನರು ಪ್ರಾಣಾಪಾಯದಿಂದ ಪರಾಗಿದ್ದಾರೆ. ಸುಮಾರು 70,000 ರೂಪಾಯಿ ಬೆಲೆಬಾಳುವ ಮೇಕೆಗಳು ಮಣ್ಣಿನ ಗೋಡೆ ಬಿದ್ದು ಮೃತಪಟ್ಟಿವೆ.  ಇದಕ್ಕೆ ಪಶುವೈದ್ಯರಿಗೆ ಅಧಿಕಾರಿಗಳ ತಿಳಿಸಿದ್ದೇವೆ ಹಾಗೆಯೇ ಗ್ರಾಮದ  ಆಡಳಿತ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಒಂದು ವಾರದ ಒಳಗಾಗಿ ಸರ್ಕಾರದಿಂದ ಬರುವ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕರಾದ ಕೆ.ಸಿ. ವೀರೇಂದ್ರ ಅವರಿಗೂ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು

ಭೀಮಸಮುದ್ರ ಪಶು ವೈದ್ಯಾಧಿಕಾರಿ ಸತೀಶ್ ಭೇಟಿ ನೀಡಿ  7 ಮೇಕೆ ಮೃತಪಟ್ಟಿದ್ದು ಮನೆ ಕುಸಿದು ಬಿದ್ದು ಮಣ್ಣಿನಲ್ಲಿಯೇ ಮುಚ್ಚಿ ಹೋಗಿವೆ. ಸರ್ಕಾರದಿಂದ ಬರುವ ಪರಿಹಾರ ಬರುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಆಡಳಿತ ಅಧಿಕಾರಿಯಾದ ಸದಾನಂದ ಹಾಗೂ ಪಶು ವೈದ್ಯರಾದ ಸತೀಶ್ ಗ್ರಾಮ ಪಂಚಾಯಿತಿಯ ಶ್ರೀನಿವಾಸ್ ಹಾಗೂ ಗ್ರಾಮ ಪಂಚಾಯತಿಯ ಸದಸ್ಯರುಗಳು ಸ್ಥಳಕ್ಕೆ ಭೇಟಿ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!