Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಬ್ಬಿ | ಹಣ ದುಪ್ಪಟ್ಟ ಆಮಿಷ : ನಾಲ್ಕು ಕೋಟಿಗೂ ಅಧಿಕ ಹಣ ವಂಚನೆ

Facebook
Twitter
Telegram
WhatsApp

ಸುದ್ದಿಒನ್, ಗುಬ್ಬಿ, ಜುಲೈ. 27 : ವಾಟ್ಸಾಪ್ ಗ್ರೂಪ್ ಮೂಲಕ ಅಪ್ ಅಪ್ಲೋಡ್ ಮಾಡಿ ಹೂಡಿದ ಹಣಕ್ಕೆ ಪ್ರತಿ ನಿತ್ಯ ದುಪ್ಪಟ್ಟ ಹಣ ನೀಡುವ ಆಮಿಷಕ್ಕೆ ಬಲಿಯಾದ ಸುಮಾರು 500 ಮಂದಿಯ ನಾಲ್ಕರಿಂದ ಐದು ಕೋಟಿ ರೂ ಹಣ ಲಪಾಟಿಯಿಸಿದ ಬೃಹತ್ ಅನೈನ್ ವಂಚನೆ ಪ್ರಕರಣ ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕಲ್ಲೂರು ಗ್ರಾಮದಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿದ ವಂಚಕರ ಜಾಲ ಮೊದಲು ಡಾಟಾ ಮೀರ್ ಎ.ಐ. ಎಂಬ ಅಪ್ ಡೌನ್ಲೋಡ್ ಮಾಡಲು ಸೂಚಿಸಿ ಹಣದ ಹೂಡಿಕೆ ಹಾಗೆಯೇ ನಿತ್ಯ ಹಣ ಲಾಭ ಬರುವ ಬಗ್ಗೆ ಹೇಳಿರುತ್ತಾರೆ. 300 ರಿಂದ ಆರಂಭಿಸಿ 4 ಲಕ್ಷದ ವರೆಗೆ ವಹಿವಾಟು ಮಾಡುವ ಮುಗ್ಧ ಜನರು ತಮ್ಮ ಹೂಡಿಕೆ ಹಣಕ್ಕೆ 80 ದಿನದಲ್ಲಿ ದುಪ್ಪಟ್ಟ ಹಣ ನೀಡುವ ಆಸೆಗೆ ವಂಚಕ ಜಾಲ ಮೊದಲ ಹಂತದಲ್ಲಿ ದುಪ್ಪಟ್ಟ ಹಣ ನೀಡಿ ನಂಬಿಸಿದ್ದಾರೆ.

ಚೈನ್ ಲಿಂಕ್ ಮೂಲಕ ವಾಟ್ಸಾಪ್ ಗ್ರೂಪ್ ಗೆ ಸೇರಿದ ಕಲ್ಲೂರಿನ 600 ಕ್ಕೂ ಅಧಿಕ ಜನ ಹಣದ ಆಸೆ ಹಾಗೆಯೇ ಒಬ್ಬ ಗ್ರಾಹಕರನ್ನು ಹುಡುಕಿಕೊಟ್ಟರೆ ಶೇಕಡಾ 10 ಕಮಿಷನ್ ಆಸೆಗೆ ಬಲಿಯಾಗಿದ್ದಾರೆ. ಬೆಂಗಳೂರು ವಾಸಿಯಾಗಿರುವ ಕಲ್ಲೂರು ಮೂಲದ ಮೂರು ಮಂದಿ ಈ ಚೈನ್ ಲಿಂಕ್ ಪ್ರಚಾರ ಮಾಡಿ ನಂತರ ಕೆಲವರನ್ನು ಬೆಂಗಳೂರು ನಗರದಲ್ಲಿ ಮೀಟಿಂಗ್ ನಡೆಸಿ ದೊಡ್ಡ ವೇತನ ನೀಡುವ ಆಸೆ ಸಹ ಹುಟ್ಟಿಸಿದ್ದಾರೆ.

5 ಸಾವಿರ ರೂಪಾಯಿ ಹೂಡಿಕೆ ಮಾಡಿದರೆ ಐದು ದಿನದಲ್ಲಿ 450 ರೂಪಾಯಿ ಬರುವ ಆಸೆ, ಕೆಲವರಿಗೆ 80 ದಿನದಲ್ಲಿ ದ್ವಿಗುಣ ಹಣ ನೀಡುವ ಆಮಿಷ ಹಾಗೆಯೇ ವಿವಿಧ ರೀತಿಯ ಸ್ಕೀಂ ವಿವರಿಸಿ ವಂಚಿಸಿ 4 ಕೋಟಿಗೂ ಅಧಿಕ ಹಣ ಸಂಗ್ರಹದ ಬಳಿಕ ಆ್ಯಪ್ ರದ್ದು ಮಾಡಿ ವ್ಯವಸ್ಥಿತವಾಗಿ ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಸಿ.ಎಸ್.ಪುರ ಪೊಲೀಸ್ ಠಾಣೆಗೆ ಸುಮಾರು 40 ಮಂದಿ ವಂಚನೆಗೆ ಒಳಗಾದವರು ದೂರು ನೀಡಿದ್ದಾರೆ. ವ್ಯವಸ್ಥಿತ ಜಾಲ ರಾಜ್ಯದೆಲ್ಲೆಡೆ ಆನ್ಲೈನ್ ಮೋಸ ನಡೆಸಿರುವ ಅನುಮಾನವಿದೆ. ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ ಮುಂದಿನ ತನಿಖೆ ನಡೆಸುವುದಾಗಿ ಡಿವೈಎಸ್ಪಿ ಶೇಖರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!