Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುಬ್ಬಿ | ಹಣ ದುಪ್ಪಟ್ಟ ಆಮಿಷ : ನಾಲ್ಕು ಕೋಟಿಗೂ ಅಧಿಕ ಹಣ ವಂಚನೆ

---Advertisement---

ಸುದ್ದಿಒನ್, ಗುಬ್ಬಿ, ಜುಲೈ. 27 : ವಾಟ್ಸಾಪ್ ಗ್ರೂಪ್ ಮೂಲಕ ಅಪ್ ಅಪ್ಲೋಡ್ ಮಾಡಿ ಹೂಡಿದ ಹಣಕ್ಕೆ ಪ್ರತಿ ನಿತ್ಯ ದುಪ್ಪಟ್ಟ ಹಣ ನೀಡುವ ಆಮಿಷಕ್ಕೆ ಬಲಿಯಾದ ಸುಮಾರು 500 ಮಂದಿಯ ನಾಲ್ಕರಿಂದ ಐದು ಕೋಟಿ ರೂ ಹಣ ಲಪಾಟಿಯಿಸಿದ ಬೃಹತ್ ಅನೈನ್ ವಂಚನೆ ಪ್ರಕರಣ ತಾಲ್ಲೂಕಿನ ಸಿ.ಎಸ್.ಪುರ ಪೊಲೀಸ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕಲ್ಲೂರು ಗ್ರಾಮದಲ್ಲಿ ವಾಟ್ಸಾಪ್ ಗ್ರೂಪ್ ರಚಿಸಿದ ವಂಚಕರ ಜಾಲ ಮೊದಲು ಡಾಟಾ ಮೀರ್ ಎ.ಐ. ಎಂಬ ಅಪ್ ಡೌನ್ಲೋಡ್ ಮಾಡಲು ಸೂಚಿಸಿ ಹಣದ ಹೂಡಿಕೆ ಹಾಗೆಯೇ ನಿತ್ಯ ಹಣ ಲಾಭ ಬರುವ ಬಗ್ಗೆ ಹೇಳಿರುತ್ತಾರೆ. 300 ರಿಂದ ಆರಂಭಿಸಿ 4 ಲಕ್ಷದ ವರೆಗೆ ವಹಿವಾಟು ಮಾಡುವ ಮುಗ್ಧ ಜನರು ತಮ್ಮ ಹೂಡಿಕೆ ಹಣಕ್ಕೆ 80 ದಿನದಲ್ಲಿ ದುಪ್ಪಟ್ಟ ಹಣ ನೀಡುವ ಆಸೆಗೆ ವಂಚಕ ಜಾಲ ಮೊದಲ ಹಂತದಲ್ಲಿ ದುಪ್ಪಟ್ಟ ಹಣ ನೀಡಿ ನಂಬಿಸಿದ್ದಾರೆ.

ಚೈನ್ ಲಿಂಕ್ ಮೂಲಕ ವಾಟ್ಸಾಪ್ ಗ್ರೂಪ್ ಗೆ ಸೇರಿದ ಕಲ್ಲೂರಿನ 600 ಕ್ಕೂ ಅಧಿಕ ಜನ ಹಣದ ಆಸೆ ಹಾಗೆಯೇ ಒಬ್ಬ ಗ್ರಾಹಕರನ್ನು ಹುಡುಕಿಕೊಟ್ಟರೆ ಶೇಕಡಾ 10 ಕಮಿಷನ್ ಆಸೆಗೆ ಬಲಿಯಾಗಿದ್ದಾರೆ. ಬೆಂಗಳೂರು ವಾಸಿಯಾಗಿರುವ ಕಲ್ಲೂರು ಮೂಲದ ಮೂರು ಮಂದಿ ಈ ಚೈನ್ ಲಿಂಕ್ ಪ್ರಚಾರ ಮಾಡಿ ನಂತರ ಕೆಲವರನ್ನು ಬೆಂಗಳೂರು ನಗರದಲ್ಲಿ ಮೀಟಿಂಗ್ ನಡೆಸಿ ದೊಡ್ಡ ವೇತನ ನೀಡುವ ಆಸೆ ಸಹ ಹುಟ್ಟಿಸಿದ್ದಾರೆ.

5 ಸಾವಿರ ರೂಪಾಯಿ ಹೂಡಿಕೆ ಮಾಡಿದರೆ ಐದು ದಿನದಲ್ಲಿ 450 ರೂಪಾಯಿ ಬರುವ ಆಸೆ, ಕೆಲವರಿಗೆ 80 ದಿನದಲ್ಲಿ ದ್ವಿಗುಣ ಹಣ ನೀಡುವ ಆಮಿಷ ಹಾಗೆಯೇ ವಿವಿಧ ರೀತಿಯ ಸ್ಕೀಂ ವಿವರಿಸಿ ವಂಚಿಸಿ 4 ಕೋಟಿಗೂ ಅಧಿಕ ಹಣ ಸಂಗ್ರಹದ ಬಳಿಕ ಆ್ಯಪ್ ರದ್ದು ಮಾಡಿ ವ್ಯವಸ್ಥಿತವಾಗಿ ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಸಿ.ಎಸ್.ಪುರ ಪೊಲೀಸ್ ಠಾಣೆಗೆ ಸುಮಾರು 40 ಮಂದಿ ವಂಚನೆಗೆ ಒಳಗಾದವರು ದೂರು ನೀಡಿದ್ದಾರೆ. ವ್ಯವಸ್ಥಿತ ಜಾಲ ರಾಜ್ಯದೆಲ್ಲೆಡೆ ಆನ್ಲೈನ್ ಮೋಸ ನಡೆಸಿರುವ ಅನುಮಾನವಿದೆ. ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ ಮುಂದಿನ ತನಿಖೆ ನಡೆಸುವುದಾಗಿ ಡಿವೈಎಸ್ಪಿ ಶೇಖರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment