Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಣನೀಯವಾಗಿ ಇಳಿಕೆ ಕಂಡ ಚಿನ್ನದ ದರ : ಇಂದು ಚಿನ್ನದ ಬೆಲೆ ಎಷ್ಟಿದೆ..?

Facebook
Twitter
Telegram
WhatsApp

 

ನವದೆಹಲಿ: ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲ್ಲೇ ಚಿನ್ನದ ದರ ಕೂಡ ಇಳಿಕೆಯತ್ತ ಮುಖ ಮಾಡಿದೆ. ಸತತವಾಗಿ ಮೂರು ದಿನಗಳಿಂದ ಇಳಿಕೆಯಾಗಿದ್ದು, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಇದು ಮಹಿಳಾ ಮಣಿಗಳ ಸಂತಸವನ್ನು ಹೆಚ್ಚಿಸಿದೆ.

ಇಂದಿನ ಮಾರುಕಟ್ಟೆಯ ಬೆಲೆ 24 ಕ್ಯಾರೆಟ್‌ನ 10 ಗ್ರಾಂಗೆ 68,720 ಇದ್ದು, 22 ಕ್ಯಾರೆಟ್ 10 ಗ್ರಾಂಗೆ 62,000 ರೂ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ​ 1 ಗ್ರಾಂ ಚಿನ್ನದ ಬೆಲೆಯು 6,325 ರೂಪಾಯಿ ಇದ್ದು, 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯು 6,900 ರೂ ಇದೆ. 22 ಕ್ಯಾರೆಟ್​ 8 ಗ್ರಾಂ ಚಿನ್ನದ ಬೆಲೆ 50,600 ಇದೆ. 24 ಕ್ಯಾರೆಟ್ 8 ಗ್ರಾಂ ಚಿನ್ನದ ಬೆಲೆ 55,200 ಇದೆ.

ಚಿನ್ನದ ದರ ಇದೇ ರೀತಿ ಇಳಿಕೆಯಾದರೆ ಎಲ್ಲರಿಗೂ ಖುಷಿ. ಆದರೆ ತಜ್ಞರು ಹೇಳುವ ಚಿನ್ನದ ದರ ಏರಿಕೆಯಾದರೂ ಆಗಬಹುದು, ಈ ತಿಂಗಳ ಕೊನೆಯ ತನಕ ಕಾದು ಹೂಡಿಕೆ ಮಾಡುವುದು ಉತ್ತಮ ಎಂದೇ ಸಲಹೆಯನ್ನು ನೀಡಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಚಿನ್ನದ ಮೇಲೆ ಶೇಕಡ 6% ರಷ್ಟು ಕಸ್ಟಮ್ಸ್ ಸುಂಕದಲ್ಲಿ ಕಡಿಮೆ ಮಾಡಲಾಗಿದೆ. ಇದರ ಪರಿಣಾಮ ಚಿನ್ನ ಮತ್ತು ಬೆಳ್ಳಿಯಲ್ಲಿ ದರ ಇಳಕೆಯಾಗುತ್ತಲೇ ಇದೆ. ಆದರೆ ಇದು ಆಷಾಢಮಾಸವಾಗಿರುವ ಕಾರಣ ಜನರು ಹೆಚ್ಚಿನ ಸಂಖ್ಯೆಯಲ್ಲೇನು ಚಿನ್ನ ಖರೀದಿ ಮಾಡುತ್ತಿಲ್ಲ. ಇನ್ನೊಂದು ವಾರ ಆಷಾಢ ಕಳೆದು ಶ್ರಾವಣ ಬರಲಿದ್ದು, ಆ ಬಳಿಕ ಚಿನ್ನದ ದರ ಏನಾಗಬಹುದು ಎಂಬುದನ್ನು ಯೋಚನೆ ಮಾಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!