Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಮಳೆಗೆ ಪ್ರಾರ್ಥನೆ, ಕತ್ತೆಗಳ ವಿಶೇಷ ಮೆರವಣಿಗೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಜುಲೈ 27: ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗೌಡರಹಟ್ಟಿ ಗ್ರಾಮಸ್ಥರು ಶನಿವಾರ ಕತ್ತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಯಲ್ಲಿ ತಮಟೆ ವಾದ್ಯದೊಂದಿಗೆ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಗೌಡರ ಹಟ್ಟಿ ಗ್ರಾಮದ ಮುಖಂಡ ಎಸ್.ರಂಗಪ್ಪ, ಮುಂಗಾರು ಹಂಗಾಮಿನಲ್ಲಿ ಮೊದಲ ಹಂತದಲ್ಲಿ ಬಿತ್ತಿರುವ ಶೇಂಗಾ, ತೊಗರಿ, ಸಜ್ಜೆ, ಔಡಲ, ಸಿರಿಧಾನ್ಯ ಮುಂತಾದ ಬೆಳೆ ಮಳೆ ಇಲ್ಲದ ಕಾರಣ ಬಾಡುತ್ತಿವೆ.
ಎರಡನೆ ಹಂತದ ಬಿತ್ತನೆಗೆ ಶೇಂಗಾ ಬೀಜ-ಗೊಬ್ಬರ ಸಿದ್ಧತೆ ಮಾಡಿಕೊಂಡು ಮುಗಿಲ ಕಡೆ ಮಳೆ ಎದುರು ನೋಡುವಂತಾಗಿದೆ. ಇನ್ನು3-4 ದಿನದಲ್ಲಿ ಮಳೆ ಬರದೆ ಹೋದರೆ ಜೀವನ ನಡೆಸಲು ತುಂಬಾ ಕಷ್ಟವಾಗುವುದಲ್ಲದೆ ನಗರಪ್ರದೇಶಕ್ಕೆ ಗುಳೆ ಹೋಗುವ ಪರಿಸ್ಥಿತಿ ಒದಗಿಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮದ ರೈತ ಕೆ.ಪಿ.ಹನುಮಂತರಾಯ, ಮಾತನಾಡಿ ರಾಜ್ಯದ ವಿವಿಧೆಡೆ ನದಿ, ಕಣಿವೆ, ಕೆರೆ-ಕಟ್ಟೆ ತುಂಬಿ ಜನರು ನೆರೆ ಹಾವಳಿ ಎದುರಿಸುತ್ತಿದ್ದರೂ ಚಿತ್ರದುರ್ಗ ಜಿಲ್ಲೆಗೆ ಏನಾಗಿದೆ ಸ್ವಾಮಿ ಮಳೆಯೇ ಇಲ್ಲ. ಬಯಲುಸೀಮೆ ಸಮಗ್ರ ನೀರಾವರಿ ಪ್ರದೇಶವನ್ನಾಗಿಸುವ ಮಹತ್ವಕಾಂಕ್ಷಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದಾಗಿದೆ ಎಂದು ಕೇಂದ್ರ ಸರ್ಕಾದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಮುಖಂಡರಾದ ಕೃಷ್ಣಪ್ಪ ಗೋಪಾಲಪ್ಪ ಜಯಣ್ಣ, ಮಂಜುನಾಥ, ಮಲಕಿಸಾಬ್, ಗಾದ್ರಿಪಾಲಯ್ಯ ಯರಓಬಳಯ್ಯ, ಎಸ್.ತಿಪ್ಪೇಶ್ ಮಹಾಂತೇಶ್, ಗಂಗಾಧರ, ರಾಘವೇಂದ್ರ ಗ್ರಾಮಸ್ಥರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!