Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ಮಳೆಗೆ ಪ್ರಾರ್ಥನೆ, ಕತ್ತೆಗಳ ವಿಶೇಷ ಮೆರವಣಿಗೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಜುಲೈ 27: ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗೌಡರಹಟ್ಟಿ ಗ್ರಾಮಸ್ಥರು ಶನಿವಾರ ಕತ್ತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗ್ರಾಮದ ಪ್ರಮುಖ ಬೀದಿಯಲ್ಲಿ ತಮಟೆ ವಾದ್ಯದೊಂದಿಗೆ ಮೆರವಣಿಗೆ ನಡೆಸಿದರು.

ಈ ಸಂದರ್ಭದಲ್ಲಿ ಗೌಡರ ಹಟ್ಟಿ ಗ್ರಾಮದ ಮುಖಂಡ ಎಸ್.ರಂಗಪ್ಪ, ಮುಂಗಾರು ಹಂಗಾಮಿನಲ್ಲಿ ಮೊದಲ ಹಂತದಲ್ಲಿ ಬಿತ್ತಿರುವ ಶೇಂಗಾ, ತೊಗರಿ, ಸಜ್ಜೆ, ಔಡಲ, ಸಿರಿಧಾನ್ಯ ಮುಂತಾದ ಬೆಳೆ ಮಳೆ ಇಲ್ಲದ ಕಾರಣ ಬಾಡುತ್ತಿವೆ.
ಎರಡನೆ ಹಂತದ ಬಿತ್ತನೆಗೆ ಶೇಂಗಾ ಬೀಜ-ಗೊಬ್ಬರ ಸಿದ್ಧತೆ ಮಾಡಿಕೊಂಡು ಮುಗಿಲ ಕಡೆ ಮಳೆ ಎದುರು ನೋಡುವಂತಾಗಿದೆ. ಇನ್ನು3-4 ದಿನದಲ್ಲಿ ಮಳೆ ಬರದೆ ಹೋದರೆ ಜೀವನ ನಡೆಸಲು ತುಂಬಾ ಕಷ್ಟವಾಗುವುದಲ್ಲದೆ ನಗರಪ್ರದೇಶಕ್ಕೆ ಗುಳೆ ಹೋಗುವ ಪರಿಸ್ಥಿತಿ ಒದಗಿಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮದ ರೈತ ಕೆ.ಪಿ.ಹನುಮಂತರಾಯ, ಮಾತನಾಡಿ ರಾಜ್ಯದ ವಿವಿಧೆಡೆ ನದಿ, ಕಣಿವೆ, ಕೆರೆ-ಕಟ್ಟೆ ತುಂಬಿ ಜನರು ನೆರೆ ಹಾವಳಿ ಎದುರಿಸುತ್ತಿದ್ದರೂ ಚಿತ್ರದುರ್ಗ ಜಿಲ್ಲೆಗೆ ಏನಾಗಿದೆ ಸ್ವಾಮಿ ಮಳೆಯೇ ಇಲ್ಲ. ಬಯಲುಸೀಮೆ ಸಮಗ್ರ ನೀರಾವರಿ ಪ್ರದೇಶವನ್ನಾಗಿಸುವ ಮಹತ್ವಕಾಂಕ್ಷಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದಾಗಿದೆ ಎಂದು ಕೇಂದ್ರ ಸರ್ಕಾದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಮುಖಂಡರಾದ ಕೃಷ್ಣಪ್ಪ ಗೋಪಾಲಪ್ಪ ಜಯಣ್ಣ, ಮಂಜುನಾಥ, ಮಲಕಿಸಾಬ್, ಗಾದ್ರಿಪಾಲಯ್ಯ ಯರಓಬಳಯ್ಯ, ಎಸ್.ತಿಪ್ಪೇಶ್ ಮಹಾಂತೇಶ್, ಗಂಗಾಧರ, ರಾಘವೇಂದ್ರ ಗ್ರಾಮಸ್ಥರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment