Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಷ್ಟೋ ಮೃತದೇಹಗಳನ್ನು ಹುಡುಕಿದ ಈಶ್ವರ್ ಗೆ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದವರದ್ದೆ ಸವಾಲು..!

---Advertisement---

ಉತ್ತರ ಕನ್ನಡ: ಶಿರೂರು ಗುಡ್ಡ ಕುಸಿತದಿಂದಾಗಿ ಕಾಣೆಯಾದವರಲ್ಲಿ ಈಗಾಗಲೇ ಹಲವು ಮೃತದೇಹಗಳು ಪತ್ತೆಯಾಗಿವೆ. ಆದರೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಸ್ಥಳೀಯರಾದ ಲೋಕೇಶ್ ಹಾಗೂ ಜಗನ್ನಾಥ ನಾಯ್ಕ ಅವರ ಮೃತದೇಹಗಳಿಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಇಂದಿಗೆ 13ನೇ ದಿನವಾಗಿದೆ. ನಿನ್ನೆಯಿಂದ ಕರಾವಳಿಯ ಈಜು ತಜ್ಞ ಈಶ್ವರ್ ಅವರನ್ನು ಕರೆತರಲಾಗಿದೆ.

ಈಶ್ವರ್ ಹಾಗೂ ತಂಡ ನದಿಗೆ ಇಳಿದು ಕಾರ್ಯಾಚರಣೆ ಶುರು ಮಾಡಿದೆ. ಆದರೆ ಅವರಿಗೂ ಮೃತದೇಹಗಳು ಸಿಗುತ್ತಿಲ್ಲ. ಗಂಗಾವಳಿ ನದಿ ನೀರಿನ ರಭಸಕ್ಕೆ ಈಶ್ವರ್ ಅಂಡ್ ತಂಡವೇ ಆಶ್ಚರ್ಯಗೊಂಡಿದೆ. ಈ ನೀರಿನಲ್ಲಿ ನಾಪತ್ತೆಯಾದವರನ್ನು ಹುಡುಕುವುದೇ ಬಹಳ ಕಷ್ಟವಾಗಿದೆ. ಅದರಲ್ಲೂ ಗಂಗಾವಳಿ ನದಿ ನೀರಿನಲ್ಲಿ ಹುಡುಕುವುದೇ ಸವಾಲಿನ ಕೆಲಸವಾಗಿದೆ. ಮೂರು ಮೃತದೇಹಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ನೀರಿನಲ್ಲಿ ಮುಳುಗಿದಾಗ ಕಣ್ಣಿಗೆ ಏನು ಕಾಣಿಸುತ್ತಿಲ್ಲ. ನೀರಿನ ಜೊತೆಗೆ ಮಣ್ಣು ಸೇರಿಕೊಂಡಿದೆ. ಹೀಗಾಗಿ ಏನು ಕಾಣಿಸುತ್ತಿಲ್ಲ ಎಂದು ಮುಳುಗು ತಜ್ಞ ಈಶ್ವರ್ ಹೇಳಿದ್ದಾರೆ.

 

ಇಂದು ಕೂಡ ಕಾರ್ಯಾಚರಣೆಯನ್ನು ಮುಂದುವರೆಸಿರುವ ಬಗ್ಗೆ ಮಾತನಾಡಿ, ನಿನ್ನೆ ಮೂರು ಜಾಗದಲ್ಲಿ ಹುಡುಕಾಡಿದ್ದೇವೆ. ಆದರೆ ಏನು ಕಂಡಿಲ್ಲ. ಇಂದು ಮುಖ್ಯ ಪಾಯಿಂಟ್ ನಲ್ಲಿ ಇಬ್ಬರು ನೀರಿನಲ್ಲಿ‌ ಮುಳುಗಿ ಹುಡುಕಾಟ ನಡೆಸಿದ್ದಾರೆ. ನಾವೂ ಕೂಡ ನಮ್ಮ ಜೀವದ ಹಂಗು ತೊರೆದು ಹುಡುಕಾಟ ನಡೆಸುತ್ತಿದ್ದೇವೆ. ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡುವುದಕ್ಕೆ ಆಗುತ್ತಿಲ್ಲ. ಒಟ್ಟು ಜನರಿರುವ ತಂಡ ಕಾರ್ಯಾಚರಣೆ ನಡೆಸುತ್ತಿದ್ದೇವೆ. ನಮ್ಮ ಪ್ರಯತ್ನ ನಾವೂ ಮಾಡಿತ್ತೇವೆ. ನಾನು ನೋಡಿದ ಹಾಗೇ ಇದು ಸವಾಲಿನ ಕೆಲಸವಾಗಿದೆ ಎಂದು ಈಶ್ವರ್ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment