Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೊರಗಜ್ಜನ ಮೊರೆ ಹೋದ ಶಾಸಕ ವಿನಯ್ ಕುಲಕರ್ಣಿ : 48 ದಿನದ ಒಳಗೆ ಪರಿಹಾರದ ಭರವಸೆ

---Advertisement---

ಮಂಗಳೂರು: ಕೊರಗಜ್ಜನನ್ನು ನಂಬದ ವ್ಯಕ್ತಿಗಳಿಲ್ಲ. ಅದೆಷ್ಟೊ ಜನರಿಗೆ ತಮ್ಮ ಸಮಸ್ಯೆಗಳಿಹೆ ಕೊರಗಜ್ಜನ ಸನ್ನಿಧಿಯಲ್ಲಿ ಪರಿಹಾರ ಸಿಕ್ಕಿದೆ. ಇದೀಗ ಶಾಸಕ ವಿನಯ್ ಕುಲಕರ್ಣಿ‌ ಕೂಡ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡಿ, ಸಮಸ್ಯೆಗೆ ಪರಿಅಹರ ಕೇಳಿಕೊಂಡಿದ್ದಾರೆ.

ಶಾಸಕ ವಿನಯ್ ಕುಲಕರ್ಣಿ, ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಕ್ಕಿಕೊಂಡಿದ್ದಾರೆ. ಅದಕ್ಕಿನ್ನು ಪರಿಹಾರ ಸಿಕ್ಕಿಲ್ಲ. ಧಾರಾವಾಡ ಕ್ಷೇತ್ರಕ್ಕೆ ಕಾಲಿಡದೆಯೇ ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದಾರೆ. ಶಾಸಕರಾಗಿಯೂ ಜನರ ಸಮಸ್ಯೆ‌ ಕೇಳಲು ಕ್ಷೇತ್ರಕ್ಕೆ ಅನುಮತಿ ಇಲ್ಲ. ಕೋರ್ಟ್ ಧಾರವಾಡ ಕ್ಷೇತ್ರಕ್ಕೆ ಅನುಮತಿ ನಿರಾಕರಿಸಿದೆ. ಈ ಸಂಬಂಧ ಎಲ್ಲಾ ಸಮಸ್ಯೆಗಳಿಗೆ ಕೊರಗಜ್ಜನ ಮೊರೆ ಹೋಗಿರುವ ವಿನಯ್ ಕುಲಕರ್ಣಿ ಕೋಲ ಸೇವೆ ನೀಡಿದ್ದಾರೆ. ಕುಟುಂಬಸ್ಥರ ಜೊತೆಗೆ ಹೋಗಿ ಇಂದು ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿರುವ ಕೊರಗಜ್ಜನಿಗೆ ಹರಕೆ ತೀರಿಸಿ ಬಂದಿದ್ದಾರೆ.

 

ಈ ವೇಳೆ ಕೊರಗಜ್ಜನಿಂದ ಭರವಸೆಯೂ ಸಿಕ್ಕಿದೆ. 48 ದಿನದ ಒಳಗೆ ಎಲ್ಲಾ‌ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದೆ. ಧಾರಾವಾಡ ಕ್ಷೇತ್ರದ ಪ್ರವೇಶ ನಿರ್ಬಂಧದ ಬಗ್ಗೆ ದೈವ ನುಡಿದಿದೆ. ಜೊತೆಗೆ ಮುಂದಿನ ಮೂರು ವರ್ಷಗಳ ಕಾಲ ತುಂಬಾ ಸೂಕ್ಷ್ಮವಾಗಿ ಇರುವಂತೆ ಎಚ್ಚರಿಕೆಯನ್ನು ನೀಡಿದೆ. ‘ಹೆಣ್ಣಿನ ಕಾರಣದಿಂದಾನೇ ಈ ಎಲ್ಲಾ‌ ಸಮಸ್ಯೆಗಳು ಶುರುವಾಗಿದ್ದು, ಅಧರ್ಮದಲ್ಲಿ ಹೋದವರನ್ನು ನಾನು ನೋಡಿಕೊಳ್ಳುತ್ತೇನೆ’ ಎಂದು ಭರವಸೆ ನೀಡಿದ್ದಾರೆ. ಕೊರಗಜ್ಜ ನೀಡಿದ ಭರವಸೆಗೆ ವಿನಯ್ ಕುಲಕರ್ಣಿ ಫುಲ್ ಖುಷಿಯಾಗಿದ್ದು, ಸಂತಸದಿಂದ ಕೋಲ ನಡೆಸಿಕೊಟ್ಟಿದ್ದಾರೆ. ‘ಚುನಾವಣಾ ಪೂರ್ವದಲ್ಲಿಯೇ ಕೋಲ ಬಗ್ಗೆ ಕಾಂಗ್ರೆಸ್ ನಾಯಕರು ಹಾಗೂ ಸ್ನೇಹಿತರು ಹೇಳಿದ್ದರು. ಆದರೆ ಈಗ ಕಾಲ ಕೂಡಿ ಬಂದಿದೆ’ ಎಂದು ವಿನಯ್ ಕುಲಕರ್ಣಿ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...