Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ 8 ಕೆರೆಗಳಿಗೆ ನೀರು : ಶಾಸಕ ವೀರೇಂದ್ರ ಪಪ್ಪಿ ಮನವಿಗೆ ಸ್ಪಂದಿಸಿದ ಡಿಸಿಎಂ ಡಿಕೆ ಶಿವಕುಮಾರ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ ‌. 28 : ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಬರುವ ಚಿತ್ರದುರ್ಗ ತಾಲ್ಲೂಕಿನಲ್ಲಿರುವ ಹೆಚ್ಚುವರಿ 8 ಕೆರೆಗಳಿಗೆ ನೀರು ಹರಿಸಲು ಆದೇಶ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಮನವಿ ಮಾಡಿದರು.

ಇತ್ತೀಚೆಗಷ್ಟೇ ಬೆಂಗಳೂರಿನ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಜೊತೆ ನಡೆದ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳ  ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಸರ್ಕಾರದ ಯಾವುದೇ ಬಂದರೂ ಭದ್ರಾ ಮೇಲ್ದಂಡೆ ಯೋಜನೆಯ ಅಡಿಯಲ್ಲಿ ಚಿತ್ರದುರ್ಗದ ಹೆಸರು ಕೇಳಿ ಬರುತ್ತಿದೆ ಆದರೆ ಚಿತ್ರದುರ್ಗ  ಕ್ಷೇತ್ರಕ್ಕೆ ಮಾತ್ರ ಹೆಚ್ಚಿನ ಪ್ರಯೋಜನವಾಗುತ್ತಿಲ್ಲ ಎಂದರು. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ವಿಚಾರದಲ್ಲಿ ಚಿತ್ರದುರ್ಗ ತಾಲ್ಲೂಕಿಗೆ ತಾರತಮ್ಯ ಮಾಡಿರುವುದರಿಂದ ಅನ್ಯಾಯವಾಗಿದೆ. ಇದನ್ನು ಮೊದಲು ಸರಿಪಡಿಸಬೇಕು ಎಂದು ಸಭೆಯಲ್ಲಿ ಆಗ್ರಹ ಮಾಡಿದರು.

ಈ ಹಿಂದೆ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕೆರೆಗಳಿಗೆ ನೀರು ತುಂಬಿಸಲು ಆದೇಶವಾಗಿತ್ತು. ಆದರೆ ಉಳಿದ 8 ಕೆರೆಗಳಿಗೆ ನೀರು ಕೊಡದಿದ್ದರೆ ಕೆರೆಗಳ ಭಾಗದ ಜನರು ಸಮಸ್ಯೆಯಿಂದ ಬಳಲಿದ್ದಾರೆ. ಆದ್ದರಿಂದ ಕೂಡಲೇ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಮುಂದಾಗಬೇಕು. ಈ 8 ಕೆರೆಗಳಿಗೆ ನೀರು ಹರಿಸಿದ್ದಲ್ಲಿ ಸಾವಿರಾರು ರೈತರ ಕೃಷಿ ಚಟುವಟಿಕೆಗಳು ಸೇರಿದಂತೆ ಅವರ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.

ಶಾಸಕರ ಮಾತಿಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ‘ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 8 ಕೆರೆಗಳಿಗೆ ನೀರು ತುಂಬಿಸಲು ಡಿಪಿಆರ್‌ ಸಿದ್ಧಗೊಳಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸುವುದರ ಜೊತೆಗೆ ಶೀಘ್ರ ನೀರು ತುಂಬಿಸಲು ಆದೇಶ ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ ರಘುಮೂರ್ತಿ ಸೇರಿದಂತೆ ವಿಶ್ವೇಶ್ವರಯ್ಯ ಜಲನಿಗಮ ವ್ಯಾಪ್ತಿಗೆ ಬರುವ ಶಾಸಕರು ಅಧಿಕಾರಿಗಳು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment