Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸ್ ವಾಹನದ ಮೇಲೆ ಕಲ್ಲೆಸೆದು ಪರಾರಿಯಾಗಿದ್ದ ಕಳ್ಳರು : ಓರ್ವನನ್ನು ಬಂಧಿಸಿದ ನಾಯಕನಹಟ್ಟಿ ಪೊಲೀಸರು

Facebook
Twitter
Telegram
WhatsApp

 

ಸುದ್ದಿಒನ್, ಚಳ್ಳಕೆರೆ, ಜುಲೈ.29 : ತಾಲ್ಲೂಕಿನ ಕುದಾಪುರ ಬಳಿ ಇತ್ತೀಚೆಗೆ ಪೊಲೀಸ್ ಜೀಪ್ ಮೇಲೆ ಆಂಧ್ರದ ಅನಂತಪುರ ಮೂಲದ ಕಳ್ಳರು ಕಲ್ಲೆಸೆದು ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ವೆಂಕಟರಮಣ ನನ್ನು ಬಂಧಿಸಿ ಆತನಿಂದ ಟಾಟಾ ಯೋಧ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

 

ಇದೇ ಜುಲೈ 21ರಂದು ಕುದಾಪುರ ಬಳಿ ತಪಾಸಣೆಗೆಂದು ವಾಹನವನ್ನು ಪೊಲೀಸರು ತಡೆದರೂ ನಿಲ್ಲಿಸದೆ ಪೊಲೀಸ್ ಜೀಪ್ ಮೇಲೆ ಕಲ್ಲೆಸೆದು ಕಳ್ಳರು ಎಸ್ಕೇಪ್ ಆಗಿದ್ದರು. ಆ ವೇಳೆ ನಾಯಕನಹಟ್ಟಿ ಪಿಎಸ್ ಐ ಶಿವಕುಮಾರ್ 2 ಗುಂಡು ಗಾಳಿಯಲ್ಲಿ ಮತ್ತು 3 ಗುಂಡು ವಾಹನದತ್ತ ಹಾರಿಸಿದ್ದರು. ಆದರೆ ಚಾಲಾಕಿ ಕಳ್ಳರು ನೆರೆಯ ಆಂಧ್ರಪ್ರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಾಯಕನಹಟ್ಟಿ ಠಾಣೆಯ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಆರೋಪಿ ವೆಂಕಟರಮಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದ ಏಳು ಜನ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!