Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ವಾಣಿ ವಿಲಾಸ ಸಾಗರಕ್ಕೆ ಒಳಹರಿವು ಹೆಚ್ಚಳ : ಜಲಾಶಯದ ಇಂದಿನ ನೀರಿನ ಮಟ್ಟ ಎಷ್ಟಿದೆ ? ಇಲ್ಲಿದೆ ಮಾಹಿತಿ…!

Facebook
Twitter
Telegram
WhatsApp

 

ಸುದ್ದಿಒನ್, ಹಿರಿಯೂರು, ಜುಲೈ. 29 : ಮಳೆಗಾಲ ಶುರುವಾದಾಗಿನಿಂದ ಈ ವರ್ಷ ಉತ್ತಮ ಮಳೆಯಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಹಳ್ಳಕೊಳ್ಳಗಳು, ನದಿಗಳು ತುಂಬಿ ಹರಿಯುವಷ್ಟು‌ ಮಳೆಯಾಗುತ್ತಿದೆ. ಈ ಬಾರಿ ಉತ್ತಮ ಮಳೆ ಜೊತೆಗೆ ಉತ್ತಮ ಬೆಳೆಯಾಗುವ ಎಲ್ಲಾ ಲಕ್ಷಣಗಳು ಕೂಡ ಇದೆ.

ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ 974 ಕ್ಯೂಸೆಕ್ ಒಳಹರಿವು ನೀರು ಹರಿದು ಬರುತ್ತಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 113.50 ಅಡಿಗೆ ಏರಿಕೆಯಾಗಿದೆ.

ಅತ್ತ ಕೆಲ್ಲೋಡ್ ಚೆಕ್ ಡ್ಯಾಂ ಮೈದುಂಬಿ ಹರಿಯುತ್ತಿದ್ದು, ಈ ನೀರು ವೇದಾವತಿ ನದಿ ಮೂಲಕ ವಾಣಿ ವಿಲಾಸ ಜಲಾಶಯ ಸೇರುತ್ತಿದೆ. ಜಲಾಶಯದ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಸಹ ಜಲಾಶಯಕ್ಕೆ ನೀರು ಸಂಗ್ರಹವಾಗಿತ್ತು. ಇದೀಗ ಮತ್ತೆ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ.

ಶನಿವಾರ ಮದಗದಕೆರೆ ಉಕ್ಕಿ ಹರಿದಿತ್ತು, ಮತ್ತೊಂದು ಕಡೆ ಅಯ್ಯನಕೆರೆಯೂ ಉಕ್ಕಿ ಹರಿಯುತ್ತಿರುವುದರಿಂದ ವೇದಾವತಿ ನದಿಗೆ ಹೆಚ್ಚು ನೀರು ಹರಿದು ಬರುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗುತ್ತಿರುವ ಕಾರಣ ಅಲ್ಲಿನ ಕೆರೆಗಳು ತುಂಬಿರುವುದರಿಂದ ವಿವಿ ಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಏರಿಕೆಯಾಗಿದೆ.

ವಾಣಿ ವಿಲಾಸ ಸಾಗರದಲ್ಲಿ ಡ್ಯಾಂ ನಲ್ಲಿ ಸೋಮವಾರ 974 ಕ್ಯೂಸೆಕ್ ಒಳಹರಿವು ಕಂಡು ಬಂದಿದೆ. ಈ ಭಾಗದಲ್ಲಿ ಅಷ್ಟಾಗಿ ಮಳೆ ಆಗಿರಲಿಲ್ಲ. ಆದರೂ  ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳ ಮಳೆ ನಿರೇ ಆಸರೆಯಾಗಿತ್ತು. ಅಲ್ಲೆಲ್ಲ ನದಿ, ಕೆರೆಗಳು ಭರ್ತಿಯಾಗಿ ವೇದಾವತಿ ನದಿಯತ್ತ ಹರಿಯುತ್ತಿವೆ ಈ ನೀರು ಮುಂದಿನ ಬೇಸಿಗೆವರೆಗೂ ನೀರಾವರಿಗೆ, ಕುಡಿಯಲು ಅನುಕೂಲವಾಗಲಿದೆ.

ಬಯಲು ಸೀಮೆಯ ಈ ಭಾಗದಲ್ಲಿ ಹಿರಿಯೂರು, ಚಳ್ಳಕೆರೆ, ಚಿತ್ರದುರ್ಗ ವ್ಯಾಪ್ತಿಯ ಜನರಿಗೆ ವಾಣಿವಿಲಾಸ ಸಾಗರದ ನಿರೇ ಪ್ರಮುಖ ಆಧಾರ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!