Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಮನೆಗೆ ಸಂಧಾನ ಮಾಡಲು ಹೋಗಿದ್ರಾ ವಿನೋದ್ ರಾಜ್ ? ಅವರು ಹೇಳಿದ್ದೇನು..?

Facebook
Twitter
Telegram
WhatsApp

ಸುದ್ದಿಒನ್, ಬೆಂಗಳೂರು: ಇತ್ತಿಚೆಗಷ್ಟೇ ಹಿರಿಯ ನಟ ವಿನೋದ್ ರಾಜ್ ಮೃತ ರೇಣುಕಾಸ್ವಾಮಿ ಮನೆಗೆ ಹೋಗಿ ಸಾಂತ್ವನ ಹೇಳಿದ್ದರು. ಜೊತೆಗೆ ಒಂದು ಲಕ್ಷ ರೂಪಾಯಿಯ ಚೆಕ್ ಅನ್ನು ನೀಡಿದ್ದರು. ವಿನೋದ್ ರಾಜ್ ಭೇಟಿಯ ಬೆನ್ನಲ್ಲೇ ಹಲವು ವಿಚಾರಗಳು ಚರ್ಚೆಗೆ ಬಂದಿತ್ತು. ಯಾಕಂದ್ರೆ ರೇಣುಕಾಸ್ವಾಮಿ ಮನೆಗೆ ಹೋಗುವುದಕ್ಕೂ ಮುನ್ನ ವಿನೋದ್ ರಾಜ್ ಅವರು ಪರಪ್ಪನ ಅಗ್ರಹಾರಕ್ಕೂ ಹೋಗಿ ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಹೀಗಾಗಿ ವಿನೋದ್ ರಾಜ್ ಅವರು ರೇಣುಕಾಸ್ವಾಮಿ ಅವರ ಮನೆಗೆ ಹೋಗಿದ್ದೆ ರಾಜಿ ಸಂಧಾನ ಮಾಡುವುದಕ್ಕಾ ಎಂಬ ಪ್ರಶ್ನೆಗಳು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂದಿತ್ತು. ಇದೀಗ ನಟ ವಿನೋದ್ ರಾಜ್ ಅವರೇ ಕ್ಲಾರಿಟಿ ಕೊಟ್ಟಿದ್ದಾರೆ.

‘ಮೊನ್ನೆ ನಾಲ್ಕೈದು ದಿನದ ಹಿಂದೆ ದರ್ಶನ್ ಅವರನ್ನು ನೋಡುವುದಕ್ಕೆ ಕಾರಾಗೃಹಕ್ಕೆ ಹೋಗಿದ್ದೆ. ಎರಡ್ಮೂರು ದಿನ ಬಿಟ್ಟು ರೇಣುಕಾಸ್ವಾಮಿ ಮನೆಗೆ ಹೋಗಿದ್ದೆ. ವಾಹಿನಿಗಳ ಮೂಲಕ ನನಗೆ ಅರ್ಥವಾಗಿದ್ದು ಏನೆಂದರೆ ರಾಜಿಸಂಧಾನ ಮಾಡುವುದಕ್ಕೋ, ಇನ್ಯಾವುದಕ್ಕೋ ನಾನು ಹೋಗಿದ್ದೀನಿ ಅಂತ ಬಿಂಬಿಸಲಾಗಿದೆ. ಖಂಡಿತ ಅದಲ್ಲ. ದರ್ಶನ್ ಅವರನ್ನು ಒಬ್ಬ ಕಲಾವಿದ ಎಂಬ ದೃಷ್ಟಿಯಿಂದ ಹೋಗಿ ನೋಡಿಕೊಂಡು ಬಂದೆ. ಚಿತ್ರದುರ್ಗಕ್ಕೆ ಯಾಕೆ ಹೋದೆ ಅಂದ್ರೆ, ರೇಣುಕಾಸ್ವಾಮಿ ಶ್ರೀಮತಿ ಅವರು ಗರ್ಭಿಣಿ. ಹುಟ್ಟುವ ಮಗುವಿಗೆ ಏನಾದರೂ ಒಳ್ಳೆಯದಾಗುತ್ತಾ ಅಂತ ಹೋಗಿದ್ದೆ. ನನ್ನ ಕಡೆಯಿಂದ ಒಂದು ಸಣ್ಣ ಕಾಣಿಕೆ ನೀಡಿದ್ದೇನೆ ಅಷ್ಟೆ.

ಯಾವುದೇ ರಾಜಿ ಸಂಧಾನ ಮಾಡುವುದಕ್ಕೆ ನಾನು ಹೋಗಿಲ್ಲ. ಅಂತಹ ಕೆಲಸವನ್ನು ನಾವೂ ಮಾಡುವುದು ಇಲ್ಲ. ಅವರ ಮನೆಯವರು ದುಃಖದಲ್ಲಿದ್ದಾರೆ ಎಂದು ಸಾಂತ್ವನ ಹೇಳಿದ್ದು ಬಿಟ್ಟರೆ ಈಗಿನ್ನು ಹುಟ್ಟಬೇಕಾದ ಮಗುವಿಗೆ ಸಹಾಯವಾಗಲೆಂದು ಚೆಕ್ ನೀಡಿ ಬಂದೆ‌’ ಎಂದು ನಟ ವಿನೋದ್ ರಾಜ್ ಕ್ಲಾರಿಟಿ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!