Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾನು ಬಿಜೆಪಿ ರಾಜ್ಯಾಧ್ಯಕ್ಷರ ಜೊತೆಗೆ ಮಾತನಾಡುವುದಿಲ್ಲ : ರಮೇಶ್ ಜಾರಕಿಹೊಳಿ ಹಿಂಗಂದಿದ್ಯಾಕೆ..?

---Advertisement---

 

ಬೆಳಗಾವಿ: ಮೂಡಾ ಹಗರಣ ವಿರೋಧಿಸಿ ಬಿಜೆಪಿ ನಾಯಕರು ಶನಿವಾರ ಪಾದಯಾತ್ರೆ ನಡೆಸುತ್ತಿದ್ದಾರೆ. ಈಗಾಗಲೇ ಎಲ್ಲಾ ತಯಾರಿಯೂ ನಡೆದಿದೆ. ಇದರ ನಡುವೆ ರಮೇಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಅಸಮಾಧಾನ. ವ್ಯಕ್ತಪಡಿಸಿದ್ದಾರೆ‌. ನಾನು ಅವರ ಜೊತೆಗೆ ಮಾತನಾಡುವುದಿಲ್ಲ. ನಾನು ಬಿಜೆಪಿ ರಾಜ್ಯಾಧ್ಯಕ್ಷರನ್ನು ಒಪ್ಪಿಲ್ಲ ಎಂದೇ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ನಮ್ಮ ಹೈಕಾಂಡ್ ಗೆ ನಾವೂ ಮೂಡಾ ಜೊತೆಗೆ ಬಳ್ಳಾರಿ ಪಾದಯಾತ್ರೆ ಮಾಡುವುದಕ್ಕೂ ಅನುಮತಿ ಕೇಳುತ್ತೇವೆ. ನಾವೂ ಪಾದಯಾತ್ರೆ ಕುರಿತು ರಾಜ್ಯಾಧ್ಯಕ್ಷರ ಬಳಿ ಕೇಳಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ನಾನು ಪಕ್ಷದ ಶಿಸ್ತಿನ ಸಿಪಾಯಿ. ನಮ್ಮ ಬಿಜೆಪಿ ರಾಜ್ಯಾಧ್ಯಕ್ಷರು ಪಾದಯಾತ್ರೆ ಮಾಡುತ್ತಿರುವುದನ್ನು ಸ್ವಾಗತಿಸುತ್ತೇನೆ. ಅದಕ್ಕಿಂತಲೂ ಮುಂಚಿತವಾಗಿ ದೆಹಲಿ ಹೈಕಮಾಂಡ್ ನಾಯಕರಿಗೆ ಮನವಿ ಮಾಡುತ್ತೇನೆ. ಮೂಡಾಗಿಂತಲೂ ವಾಲ್ಮೀಕಿ ಹಗರಣ ದೊಡ್ಡದಿದೆ. ಅದನ್ನು ಖಂಡಿಸಿ ಬಳ್ಳಾರಿ ಪಾದಯಾತ್ರೆಗೆ ಅವಕಾಶ ನೀಡುವಂತ ಮನವಿ ಮಾಡುತ್ತೇನೆ ಎಂದಿದ್ದಾರೆ.

ಮೈಸೂರು ನಗಾರಾಭಿವೃದ್ದಿಗಿಂತ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣಗಳು ಬಹಳ ದೊಡ್ಡದು. ವಾಲ್ಮೀಕಿ ಹಗರಣ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ಸಿದ್ದರದ್ದೇವೆ‌. ಮೂಡಾ ಹಗರಣದ ಕುರಿತು ನ್ಯಾಯಾಂಗ ತನಿಖೆ ನಡೆಯುತ್ತಿದೆ. ಪಾದಯಾತ್ರೆ ಮೈಸೂರಿಗೆ ಸೀಮಿತ ಮಾಡಬಾರದು. ರಾಜ್ಯದಲ್ಲಿ ವಾಲ್ಮೀಮಿ ಜನಾಂಗ ದೊಡ್ಡದಿದೆ. ನಮ್ಮ ಜನಾಂಗಕ್ಕೆ‌ ಮೋಸ ಮಾಡಿರುವ ಸರ್ಕಾರ್ ವಿರುದ್ಧ ಬಳ್ಳಾರಿ ಪಾದಯಾತ್ರೆ ಮಾಡಬೇಕಿದೆ. ನಾನೇ ಹೈಕಮಾಂಡ್ ಅನುಮತಿಯನ್ನು ಕೇಳುತ್ತೇನೆ. ನಾನು ಹಾಗೂ ಯತ್ನಾಳ್ ಇನ್ನಷ್ಟು ಕಾರ್ಯಕರ್ತರನ್ನು ಸೇರಿಸಿಕೊಂಡು ಕೂಡಲ ಸಂಗಮದಿಂದ ಪಾದಯಾತ್ರೆ ಮಾಡುತ್ತೇವೆ ಎಂದು ಮಾಜಿ ಸಚುವ ರಮೇಶ್ ಜಾರಕಿಹೊಳಿ ರಾಜ್ಯ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment