Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಭೀಮ ಸಮುದ್ರಕ್ಕೆ ತಹಶೀಲ್ದಾರ್ ಭೇಟಿ : ಸರ್ಕಾರಿ ಶಾಲೆ, ಆಸ್ಪತ್ರೆಗೆ ಭೇಟಿ : ಜಯಪ್ಪಗೆ ಸರ್ಕಾರಿ ಸವಲತ್ತುಗಳ ಭರವಸೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಜುಲೈ. 30 : ಕಳೆದ ಶುಕ್ರವಾರ ಮಳೆಯಿಂದಾಗಿ ಕುಸಿದು ಬಿದ್ದದ್ದ ಜಯಪ್ಪ ಅವರ ಮನೆಗೆ ಇಂದು (ಮಂಗಳವಾರ) ತಹಶೀಲ್ದಾರ್  ನಾಗವೇಣಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಂತರ ಮಾತನಾಡಿದ ಅವರು, ಮನೆ ಬಿದ್ದು ಹಾನಿಗೊಳಗಾದ ಜಯಪ್ಪನವರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಆದಷ್ಟು ಬೇಗ ಕುಡಿಸಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಅವರಿಗೆ ವಾಸ ಮಾಡಲು ಶಾಲಾ ಕೊಠಡಿಯನ್ನು ನೀಡಿದ್ದೇವೆ. ಮತ್ತು ಅವರಿಗೆ ಶಾಲೆಯಲ್ಲಿ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿ ಊಟವನ್ನು ನೀಡುವಂತೆ ತಿಳಿಸಿದ್ದೇವೆ. ಅವರು ತುಂಬಾ ಬುಡವರಾಗಿದ್ದು ಜೀವನಕ್ಕೆ ಮೇಕೆ ಸಾಕಾಣೆ ಮಾಡುತ್ತಿದ್ದರು. ದುರದೃಷ್ಟವಶಾತ್ ಮಳೆಯಿಂದ ಸಾಕಿರುವ 7 ಮೇಕೆಗಳು ಮೃತಪಟ್ಟಿವೆ. ಆದಷ್ಟು ಬೇಗ ಮನೆಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ,  ಬಿಸಿ ಊಟದ ವ್ಯವಸ್ಥೆಯನ್ನು ಪರಿಶೀಲಿಸಿದರು.


ಆಸ್ಪತ್ರೆಗೆ ಭೇಟಿ ನೀಡಿ ಜನವರಿಯಿಂದ ಡೆಂಗಿ ಜ್ವರ ಜಾಸ್ತಿಯಾಗಿದ್ದು ಇದರ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತೆ ವೈದ್ಯರಿಗೆ ತಿಳಿಸಿದರು. ಔಷಧಿ ದಾಸ್ತಾನು ಓ ಪಿ ಡಿ ಪರಿಶೀಲಿಸಿದರು.  ಹಾಗೆಯೇ  ಇದೇ ಸಂದರ್ಭದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಸಾರ್ವಜನಿಕರನ್ನು ಮಾತನಾಡಿಸಿ ವೈದ್ಯರು ಸಮಯಕ್ಕೆ ಸರಿಯಾಗಿ ಬರುತ್ತಾರಾ ಎಂದು ಗ್ರಾಮಸ್ಥರನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ವತ್ಸಲ, ಗ್ರಾಮ ಆಡಳಿತ ಅಧಿಕಾರಿ ಸದಾನಂದ ಹಾಗೂ ಸಾರ್ವಜನಿಕರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...