Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರದಿಂದ ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ : ಈಗ ಬಿಯರ್ ಬೆಲೆ ಎಷ್ಟಿದೆ ಗೊತ್ತಾ..?

---Advertisement---

ಬೆಂಗಳೂರು: ಬಿಯರ್ ಪ್ರಿಯರಿಗೆ ಮತ್ತೆ ಶಾಕ್ ಆಗಿದೆ. ಬೆಲೆಯಲ್ಲಿ ಸರ್ಕಾರ ಮತ್ತೆ ಹೆಚ್ಚಳ ಮಾಡಿದೆ. ಫೆಬ್ರವರಿಯಲ್ಲಷ್ಟೇ ಬೆಲೆ ಏರಿಕೆ ಮಾಡಿತ್ತು. ಇದರಿಂದ ಬಿಯರ್ ಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಹದಿನೇಳು ತಿಂಗಳಲ್ಲಿ ಇದು ಐದನೇ ಸಲ ಏರಿಕೆಯಾಗುತ್ತಿದೆ. ಕಚ್ಚಾ ವಸ್ತುಗಳ ದರ ಏರಿಕೆಯ ನೆಪವೊಡ್ಡಿ ದರ ಏರಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎಲ್ಲಾ ಬ್ರ್ಯಾಂಡ್ ಗಳ ಬಿಯರ್ ದರ ಪ್ರತಿ ಬಾಟೆಲ್ ಗೆ 10ರಿಂದ 20 ರೂಪಾಯಿ ಆಗಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ 10 ರೂಪಾಯಿ ಏರಿಕೆ ಮಾಡಲಾಗಿತ್ತು. ಏರಿಕೆಯಾಗುತ್ತಲೇ ಬರುತ್ತಿದ್ದು, ಈಗ ಒಂದು ಬಿಯರ್ ಬಾಟೆಲ್ 50-60 ರೂಪಾಯಿ ಹೆಚ್ಚಳವಾದಂತೆ ಆಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಕಳೆದ ಒಂದು ತಿಂಗಳ ಹಿಂದಷ್ಟೇ ಬಿಯರ್ ಕಂಪನಿಗಳು ಬೆಲೆ ಏರಿಕೆ ಮಾಡಿಕೊಂಡಿದ್ದವು. ಕೆಲವು ಕಂಪನಿಗಳ ಬಿಯರ್ ದರ ಕಳೆದ ಗುರುವಾರದಿಂದಾನೇ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ ಅಥವಾ ಬುಧವಾರದಿಂದ ಜಾರಿಯಾಗಲಿದೆ‌. ಎಲ್ಲಾ ಬ್ರ್ಯಾಂಡ್ ಗಳ ಬಿಯರ್ ಬೆಲೆ ಪ್ರತಿ ಬಾಟೆಲ್ ಗೆ 10-20 ರೂಪಾಯಿ ಹೆಚ್ಚಳವಾಗಿದೆ. ರಾಜ್ಯ ಸರ್ಕಾರ ಮದ್ಯದ ಮೇಲಿನ ಬೆಲೆ ಹಾಗೂ ವಾಣಿಜ್ಯ ವಾಹನಗಳ ಮೇಲಿನ ಸಾರಿಗೆ ಸೆಸ್ ಅನ್ನು ಏರಿಕೆ ಮಾಡಿತ್ತು. ಈಗ ಮತ್ತೆ ಬಿಯರ್ ಬೆಲೆಯಲ್ಲಿ ಏರಿಕೆ ಮಾಡಿರುವುದು ಮದ್ಯಪಾನ ಪ್ರಿಯರ ಹಾರ್ಟ್ ಬ್ರೇಕ್ ಮಾಡಿದೆ. ಹೀಗೆ ಹತ್ತಿಪ್ಪತ್ತು ಜಾಸ್ತಿ ಮಾಡುತ್ತಾ ಹೋದರೆ ಹೇಗೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment