Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ |  ಪಿ.ಡಿ.ಒ. ಅಮಾನತು : ಜಿ.ಪಂ. ಸಿಇಒ  ಆದೇಶ

Facebook
Twitter
Telegram
WhatsApp

ಚಿತ್ರದುರ್ಗ. ಜುಲೈ.30:  ಗ್ರಾಮ ಪಂಚಾಯತಿಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪಕ್ಕಾಗಿ ಭರಮಸಾಗರ ಗ್ರಾಮ ಪಂಚಾಯತಿ ಪಿಡಿಒ ಶ್ರೀದೇವಿ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಭರಮಸಾಗರ ಗ್ರಾ.ಪಂ. ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀದೇವಿ ಅವರು ಕಾನೂನು ಬಾಹಿರವಾಗಿ ಸಾರ್ವಜನಿಕ ವಿರೋಧಿ, ಸರ್ವಾಧಿಕಾರಿ ಧೋರಣೆಯಿಂದ ಕರ್ತವ್ಯ ನಿರ್ವಹಣೆ, ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಯಾವುದೇ ಬೆಲೆ ಕೊಡದೆ, ಗೌರವ ನೀಡದೆ, ಕಚೇರಿಯ ನೌಕರರನ್ನಾಗಲಿ, ಸಿಬ್ಬಂದಿಯನ್ನಾಗಲಿ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಆಡಳಿತ ನಡೆಸುತ್ತಿದ್ದು, ಗ್ರಾ.ಪಂ. ನ ವಿವಿಧ ಕೆಲಸಗಳಿಗೆ ಬರುವ ಸಾರ್ವಜನಿಕರಿಂದ ರಶೀದಿ ಹಣ ಪಾವತಿಸಿಕೊಂಡು, ಗ್ರಾ.ಪಂ. ಖಾತೆಗೆ ಜಮಾ ಮಾಡದೆ ಹಣ ದುರುಪಯೋಗ ಮಾಡಿರುತ್ತಾರೆಂದು, ಅಲ್ಲದೆ ಕೆಲವು ಇ-ಸ್ವತ್ತುಗಳ ವಿತರಣೆಗೆ ಪಾವತಿಸಲಾದ ಹಣಕ್ಕೆ ರಸೀದಿ ಹಾಕದೆ ಹಣವನ್ನು ಸ್ವಂತಕ್ಕೆ ಉಪಯೋಗಿಸಿರುತ್ತಾರೆ ಎಂಬುದಾಗಿ ಗ್ರಾ.ಪಂ. ಅಧ್ಯಕ್ಷರು, ಗ್ರಾ.ಪಂ. ಸದಸ್ಯರು ನೀಡಿರುವ ದೂರುಗಳ ಕುರಿತು ಜಿ.ಪಂ. ಮುಖ್ಯ ಲೆಕ್ಕಾಧಿಕಾರಿಯವರು ವಿಶೇಷ ಲೆಕ್ಕ ತನಿಖೆ ಕೈಗೊಂಡು ತನಿಖಾ ವರದಿಯನ್ನು ಸಲ್ಲಿಸಿದ್ದರು.

96 ಸಾವಿರ ರೂ. ಗಳಿಗೆ ಸಾರ್ವಜನಿಕರಿಂದ ಶುಲ್ಕ ಪಡೆದು ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮ್ಯಾನ್ಯುಯಲ್‌ನಲ್ಲಿ ಜನರಲ್ ಲೈಸೆನ್ಸ್ ನೀಡಿರುವುದು, ಸೇರಿದಂತೆ ಗ್ರಾ.ಪಂ. ಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗವಾಗಿರಬಹುದೆಂಬ ಅಂಶ ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ಅವರು ವರದಿ ಸಲ್ಲಿಸಿದ್ದರು.

ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೀಡಿದ ನೋಟಿಸ್‌ಗೆ, ಪಿಡಿಒ ಶ್ರೀದೇವಿ ಅವರು ನೀಡಿರುವ ಸಮಜಾಯಿಷಿಯು ಅಸಮಂಜಸವಾಗಿರುವುದರಿAದ ನಿಯಮಾನುಸಾರ ಶ್ರೀದೇವಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಇಓ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!