Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ವಾರ್ತೆ | ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ. ಜುಲೈ31:  ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ “ಸಖಿ” (ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 1 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ, ವಿದ್ಯಾರ್ಹತೆ, ಗೌರವಧನದ ವಿವರ: ಸೆಂಟರ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಎಂಎಸ್ ಡಬ್ಲ್ಯೂ/ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ, ಎಂಎಸ್ಸಿ ಗೃಹ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (ಮಾನವ ಅಭಿವೃದ್ಧಿ ಮತ್ತು ಕುಟುಂಬ ಸಂಬAಧ), ಎಂಎಸ್ಸಿ ಸೈಕಾಲಜಿ, ಎಂಎಸ್ಸಿ ಮನೋವೈದ್ಯಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕೌನ್ಸಿಲಿಂಗ್ ಕ್ಷೇತ್ರದಲ್ಲಿ ಕನಿಷ್ಟ ಐದು ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯಗತ್ಯವಾಗಿದೆ. ಮಾಸಿಕ ರೂ.40,000/- ವೇತನ ನೀಡಲಾಗುವುದು.

ಕೌನ್ಸಲರ್-(ಸೈಕೋ ಸೋಶಿಯಲ್ ಕೌನ್ಸೆಲಿಂಗ್) 1 ಹುದ್ದೆಗೆ ಎಂಎಸ್ ಡಬ್ಲ್ಯೂ, ಎಂಎಸ್ಸಿ ಗೃಹ ವಿಜ್ಞಾನ (ಮಾನವ ಅಭಿವೃದ್ಧಿ ಮತ್ತು ಕುಟುಂಬ ಸಂಬAಧ), ಮನೋವಿಜ್ಞಾನ, ಮನೋವೈದ್ಯಶಾಸ್ತçಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕೌನ್ಸಿಲಿಂಗ್ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯಗತ್ಯವಾಗಿದೆ. ಮಾಸಿಕ 30,000/- ವೇತನ ನೀಡಲಾಗುವುದು.

ಕೇಸ್ ವರ್ಕರ್/ಸಮಾಜ ಕಾರ್ಯಕರ್ತ-2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಬಿಎಸ್‌ಡಬ್ಲ್ಯೂ, ಬಿ.ಎ (ಸಮಾಜಶಾಸ್ತç) ಮಹಿಳಾ ಅಧ್ಯಯನದಲ್ಲಿ ಪದವೀಧರಾಗಿರಬೇಕು. ಎರಡು ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯಗತ್ಯ. ಮಾಸಿಕ 25,000/-ವೇತನ ನೀಡಲಾಗುವುದು.

ಪ್ಯಾರಲೀಗಲ್ ಪರ್ಸನಲ್ /ಲಾಯರ್ – 2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗೆ ಕಾನೂನು ಪದವಿ ಜೊತೆಗೆ 2-3 ವರ್ಷಗಳ ಅನುಭವ ಹೊಂದಿರಬೇಕು. ಮಾಸಿಕ 25,000/ ವೇತನ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಜಿಲ್ಲಾ ಬಾಲಭವನ ಆವರಣ, ಚಿತ್ರದುರ್ಗ ಇ ಮೇಲ್   ddwcdcta@gmail.com   ಹಾಗೂ ದೂರವಾಣಿ ಸಂಖ್ಯೆ 08194-234579ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment