Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದಿಂದ ಬೆಳೆ ಹಾನಿಗೆ ಪರಿಹಾರ ಬಂದೆ ಬರುತ್ತದೆ : ತಹಶೀಲ್ದಾರ್ ಎನ್. ರಘುಮೂರ್ತಿ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ನ.18): ಬೆಳೆ ನಷ್ಟವಾಗಿದೆ ಎಂದು ರೈತರ ಬಾಯಲ್ಲಿ ಆತ್ಮಹತ್ಯೆ ಮಾತು ಬರಬಾರದು ಸರ್ಕಾರದಿಂದ ಬೆಳೆ ಹಾನಿಗೆ ಪರಿಹಾರ ಬಂದೆ ಬರುತ್ತದೆ. ನಾವು ಬೆಳೆ ನಷ್ಟದ ವರದಿ ಕಳಸುತ್ತೇವೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ರೈತರಿಗೆ ಸಂತ್ವಾನ ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಸಮೀಪ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯೊಂದಿಗೆ ನಷ್ಟವಾದ ಶೇಂಗಾ ಬೆಳೆ ಸಮೀಕ್ಷೆ ನಡೆಸಿ ಅವರು ಮಾತನಾಡಿದರು.

ತಾಲ್ಲೂಕಿನಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾದರೂ ಸಮಯಕ್ಕೆ ಸರಿಯಾಗಿ ಬಾರದೆ ರೈತರ ಬೆಳೆ ನಷ್ಟವಾಗಿದ್ದರೆ, ಇನ್ನು ಕಳೆದ 12 ದಿನಗಳಿಂದ  ಸುರಿದ ಮಳೆಗೆ ಶೇಂಗಾ ಬಳ್ಳಿಗಳಿಗೆ ಬೂದಿ ರೋಗ ಬಿದ್ದು ಶೇಂಗಾ ಬಳ್ಳಿಗಳು ಕಟಾವು ಮಾಡಲು ಬಾರದಂತೆ ನೆಲದಲ್ಲಿಯೇ ಶೇಂಗಾ ಕಾಯಿಗಳು ನೆಲದಲ್ಲಿಯೇ ಉದುರಿ ಹೋಗಿವೆ. ಇನ್ನು ಬಳ್ಳಿಯು ಸಂಪೂರ್ಣ ವಾಗಿ ಕೊಳೆತು ಹೋಗಿದ್ದು ರೈತರ ನಷ್ಟದಲ್ಲಿ ಇದ್ದಾರೆ ಎಂದು ಮಾಹಿತಿ‌ನೀಡಿದರು.

ತಾಲ್ಲೂಕಿನಲ್ಲಿ ಶೇಂಗಾ ಬೆಳೆಯು 56 ಸಾವಿರ ಹೆಕ್ಟರ್ ಪ್ರದೇಶ ನಷ್ಟವಾಗಿದೆ ಎಂದು ಅಂದಾಜಿ ಸಲಾಗಿದೆ. ಇನ್ನು ಈರುಳ್ಳಿ 8600 ಸಾವಿರ ಹೆಕ್ಟರ್ ಪ್ರದೇಶದಲ್ಲಿ ನಾಶವಾಗಿದೆ. ಇನ್ನು ಮೂರು ದಿನ ರೈತರ  ಬೆಳೆಗಳ ಹಾನಿ ಕುರಿತು ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಈ ವೇಳೆ ಕೃಷಿ ಸಹಾಯಕ ನಿರ್ದೇಶಕ ಆಶೋಕ್, ರೈತ ಮುಖಂಡ  ಕೆ.ಪಿ.ಭೂತಯ್ಯ, ಕೃಷಿ ಇಲಾಖೆ, ತೋಟಗಾರಿಕೆ  ಸಿಬ್ಬಂದಿಗಳು ಹಾಗೂ ರೈತರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!