Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಗಸ್ಟ್ 05 ರಂದು ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರಾದ ವಾಣಿ ಕೆ ಶಿವರಾಂರವರಿಗೆ ಅಭಿನಂದನಾ ಸಮಾರಂಭ

Facebook
Twitter
Telegram
WhatsApp

ಗುಬ್ಬಿ : ಗುಬ್ಬಿ ತಾಲೂಕು ಛಲವಾದಿ ಮಹಾಸಭಾ ವತಿಯಿಂದ  ಆಗಸ್ಟ್ 05 ರಂದು ರಾಜ್ಯಾಧ್ಯಕ್ಷರಾದ ವಾಣಿ ಕೆ ಶಿವರಾಂರವರಿಗೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯರಾದ ಮೋಹನ್ ಕುಮಾರ್ ದಾಸಪ್ಪ ನವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಸಮಾಜದ ಪಟ್ಟಣ ಪಂಚಾಯಿತಿ ಸದಸ್ಯರುಗಳಿಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳಿಗೆ ಸನ್ಮಾನ ಹಾಗೂ ಸದಸ್ಯತ್ವ ಅಭಿಯಾನ ಮತ್ತು 2023- 24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಪಟ್ಟಣದ ಎಸ್ ಎಂ ಪ್ಯಾಲೆಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಈರಣ್ಣ ಟಿ. ತಿಳಿಸಿದರು.

ಉಪಾಧ್ಯಕ್ಷ ಕಿಟ್ಟದಕುಪ್ಪೆ ನಾಗರಾಜ್ ಮಾತನಾಡಿ ಹಿರಿಯ ರಂಗಭೂಮಿ ಕಲಾವಿದ ದಿವಂಗತ ಎನ್. ಜಗನ್ನಾಥ್ ರವರ ವೇದಿಕೆ ವತಿಯಿಂದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ತಾಲೂಕಿನ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಿಳಿಸಿದರು.

ಸಚಿನ್ ಟಿ ಜಿ ಮಾತನಾಡಿ ಛಲವಾದಿ ಸಮುದಾಯದ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಇರುಕಸಂದ್ರ ಮಂಜುನಾಥ್, ಯುವ ಘಟಕದ ಗೌರವಾಧ್ಯಕ್ಷ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಮಧು ಎಚ್ ಕೆ, ಗಿರೀಶ್ ತಿಪ್ಪೂರ್, ಭರತ್ ಕಿಟ್ಟದ ಕುಪ್ಪೆ, ಯುವ ಘಟಕ ಸಹ ಕಾರ್ಯದರ್ಶಿ ಸೃಜನ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಮುನಿರಾಜು, ಸದಸ್ಯರಾದ ಚಂದ್ರಪ್ಪ,ಯತೀಶ್, ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!