Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗುಬ್ಬಿ | ಆಗಸ್ಟ್ 05 ರಂದು ಸರ್ಕಾರದ ವಿರುದ್ಧ ಬಿಎಸ್ಪಿ ವತಿಯಿಂದ ಪ್ರತಿಭಟನೆ

---Advertisement---

ಗುಬ್ಬಿ : ಎಸ್ಸಿ ಎಸ್ಟಿ ಹಣ ದುರುಪಯೋಗ ಮಾಡುವ ಮೂಲಕ ಸಮುದಾಯದ ಜನಕ್ಕೆ ವಂಚಿಸಿದ ಸರ್ಕಾರದ ವಿರುದ್ಧ ಅಗಸ್ಟ್ 5 ರಂದು ಪ್ರತಿಭಟನೆಯನ್ನು ಮಾಡಲಾಗುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ತಾಲೂಕು ಅಧ್ಯಕ್ಷ ಕಲ್ಲರದಗೆರೆ ಶಿವಣ್ಣ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್ಸಿ ಹಾಗೂ ಎಸ್ ಟಿ ಸಮುದಾಯಕ್ಕೆ ನೀಡಿದ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಸರ್ಕಾರದ ವಿರುದ್ಧ ಆಗಸ್ಟ್ 5 ರಂದು ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಮಾಡಿ ತಹಶೀಲ್ದಾರ್ ಅವರಿಗೆ ಮನವಿಯನ್ನು ಸಲ್ಲಿಸುತ್ತೇವೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮ ಮಂಡಳಿಯ ಸುಮಾರು 187 ಕೋಟಿ ಅಷ್ಟು ಹಣವನ್ನು ಸರಕಾರವು ಅನಗತ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಂಡಿರುವುದು ತಿಳಿದಿದೆ, ಇನ್ನೂ ಎಸ್ ಸಿ ಸಮುದಾಯಕ್ಕೆ ನೀಡಿದ್ದ 25,500 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗಾಗಿ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜಿಲ್ಲಾಧ್ಯಕ್ಷ ಹಾಗೂ ತಾಲೂಕು ಮಟ್ಟದಲ್ಲಿಯೂ ಸಹ ನಮ್ಮ ಹಿಂದುಳಿದ ಸಮುದಾಯಗಳ ಹಣವನ್ನ ದುರ್ಬಳಕೆ ಮಾಡಿಕೊಂಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜು ಮಂಚಲದೊರೆ, ದಲಿತ್ ಗಂಗಣ್ಣ, ಮೂರ್ತಿ ಇರಸಂದ್ರ ಭಾಗಿಯಾಗಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...