Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

SC/ST ಒಳಮೀಸಲಾತಿ ಸಮಾನತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ : ಚಿತ್ರದುರ್ಗದಲ್ಲಿ ದಲಿತ ಮುಖಂಡರ ಸಂಭ್ರಮಾಚರಣೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಪರಿಶಿಷ್ಣ ಜಾತಿ/ಪಂಗಡಗಳ ಮೀಸಲಾತಿಯಡಿ ರಾಜ್ಯ ಸರ್ಕಾರಗಳಿಗೆ ಒಳಮೀಸಲು ನೀಡುವ ಅಧಿಕಾರವಿದೆಯಾ ಎಂಬ ಸೂಕ್ಷ್ಮ ಸಂಗತಿಯ ವಿಚಾರಣೆಯನ್ನು ಸರ್ವೋಚ್ಛ ನ್ಯಾಯಾಲಯದ ಏಳು ಸದಸ್ಯರ ಪೀಠ ಕಳೆದ ವರ್ಷ ಆರಂಭಿಸಿತ್ತು. ಕರ್ನಾಟಕವೂ ಸೇರಿದಂತೆ ಇಡೀ ದೇಶದ ಮೇಲೆ ಪರಿಣಾಮ ಬೀರುವಂತ ಅರ್ಜಿ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿದ್ದ ಪೀಠ ಕೈಗೊಂಡಿತ್ತು. ಇದೀಗ ರಾಜ್ಯ ಸರ್ಕಾರಗಳಿಗೆ ಈ ಹೊಣೆ ಹೊರಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಒಳ ಮೀಸಲಾತಿ ಪರ ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿದ್ದಂತೆ ಚಿತ್ರದುರ್ಗದಲ್ಲಿ ದಲಿತ ಮುಖಂಡರು ಸಂಭ್ರಮಿಸಿದ್ದಾರೆ. ನಗರದ ಡಾ.ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಪ್ರತಿಮೆಯ ಪಾದಕ್ಕೆ ನಮಿಸಿದ ಮುಖಂಡರು, ಜೈಕಾರ ಹಾಕಿದ್ದಾರೆ.

ಸಿಜೆಐ ಚಂದ್ರಚೂಢ ನೇತೃತ್ವದ ಪೀಠದಿಂದ ಮಹತ್ವದ ತೀರ್ಪು ಬಂದಿದೆ. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿಯವರು ಮಾತ್ರ ಭಿನ್ನ ತೀರ್ಪು ನೀಡಿದ್ದಾರೆ. ಉಳಿದ ಆರು ನ್ಯಾಯಮೂರ್ತಿಗಳು ಒಳಮೀಸಲಾತಿ ಸಮಾನತೆ ಉಲ್ಲಂಘಿಸುವುದಿಲ್ಲ ಎಂದು ತೀರ್ಪು ನೀಡಿದ್ದಾರೆ.

ಕರ್ನಾಟಕದಲ್ಲಿಯೂ ಈ ಹಿಂದೆ ಇದ್ದ ಬಸವರಾಜ್ ಬೊಮ್ಮಾಯಿ ಸರ್ಕಾರ ಎಸ್ಸಿ/ಎಸ್ಟಿ ಒಳಮೀಸಲಾತಿ ಘೋಷಣೆ ಮಾಡಿತ್ತು. ಎಸ್ಸಿ/ಎಸ್ಟಿ ಒಳಮೀಸಲಾತಿ ವಿಚಾರವನ್ನು ವಿಚಾರಣೆ‌ ನಡೆಸಿದ ಸುಪ್ರೀಂ ಕೋರ್ಟ್, ಕ್ರಿಮಿಲೇಯರ್ ವರ್ಗವನ್ನು ಎಸ್ಸಿ/ಎಸ್ಟಿ ಮೀಸಲಾತಿಯಿಂದ ಹೊರಗಿಡಬೇಕು. ರಾಜ್ಯ ಸರ್ಕಾರಗಳು ಕ್ರಿಮಿಲೇಯರ್ ವರ್ಗಗಳನ್ನು ಗುರುತಿಸಲು ನೀತಿ ರೂಪಿಸಬೇಕು. ಸಮಾನತೆ ಸಾಧಿಸಲು ಇರುವುದು ಇದೊಂದೆ ಮಾರ್ಗ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ, ಕ್ರಿಮಿಲೇಯರ್ ಒಬಿಸಿಗೆ ಅನ್ವಯವಾಗುತ್ತದೆ. ಎಸ್ಸಿ/ಎಸ್ಟಿಗೂ ಅನ್ವಯವಾಗುತ್ತದೆ ಎಂದು ತನ್ನ ತೀರ್ಪಿನಲ್ಲಿ ತಿಳಿಸಿದೆ. ತನ್ನ ಮಹತ್ವದ ತೀರ್ಪಿನಲ್ಲಿ ಎಸ್ಸಿ/ಎಸ್ಡಿ ಉಪ ವರ್ಗೀಕರಣಕ್ಕೆ ಅಸ್ತು ಎಂದಿದೆ. ರಾಜ್ಯಗಳಿಗೆ ಉಪವರ್ಗೀಕರಣ ಮಾಡಲು ಅಧಿಕಾರವಿದೆಯೆಂದು ಸಿಜೆಐ ಚಂದ್ರಚೂಢ ನೇತೃತ್ವದ ಪೀಠ ತೀರ್ಪು ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!