Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಚಾಲನೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 01 : ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾದರೆ ಗ್ರಾಮಗಳು ಸರ್ವತೋಮುಖ ಅಭಿವೃದ್ಧಿಯಾಗುತ್ತವೆ. ಪ್ರತಿ ಗ್ರಾಮದಲ್ಲೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು  ಎಂದು ಶಾಸಕ ಕೆ.ಸಿ. ವೀರೇಂದ್ರ ತಿಳಿಸಿದರು.

ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಟಿಹಳ್ಳಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ 25 ಲಕ್ಷ ರೂ ಹಾಗೂ ದೊಡ್ಡ ಸಿದ್ದವನಹಳ್ಳಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಾಗೂ ಕರಿಯಟ್ಟಿ ಗ್ರಾಮದಲ್ಲಿ ಜಲ್ ಜೀವನ್ ಕುಡಿಯುವ ನೀರಿನ ಯೋಜನೆಯ ಅಡಿಯಲ್ಲಿ  ಸುಮಾರು 38 ಲಕ್ಷ ರೂಪಾಯಿ ಕಾಮಗಾರಿ ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ನನ್ನ ಮತಕ್ಷೇತ್ರಕ್ಕೆ ಸಂಬಂಧಪಟ್ಟ ಹಳ್ಳಿಗಳಿಗೆ ಭೇಟಿ ಮಾಡಿ ಅಲ್ಲಿನ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಚರಂಡಿ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವುದಾಗಿ ತಿಳಿಸಿದರು.

2024-25ನೇ ಸಾಲಿನ ರೈತ ಆತ್ಮಹತ್ಯೆ ಪರಿಹಾರ ನಿಧಿಯನ್ನು ಆನಂದಪ್ಪ ಬಿನ್ ಮಲ್ಲಪ್ಪ ವಡ್ಡರಸಿದ್ದವ್ವನಹಳ್ಳಿ,  ಹನುಮಂತಪ್ಪ ಬಿನ್ ಮಾರಪ್ಪ, ಕರುರುಬರಹಳ್ಳಿ,  ಬಸವರಾಜಪ್ಪ ಬಿನ್ ಲೇಟ್ ಈರಪ್ಪ, ಹುಲ್ಲೂರು ಇವರ ವಾರಸುದಾರರಿಗೆ ಶಾಸಕರು ತಲಾ 5.00 ಲಕ್ಷ ಪರಿಹಾರ ನಿಧಿಯ ಬಿಡುಗಡೆ ಪತ್ರವನ್ನು ವಿತರಣೆ ಮಾಡಿದ್ದೇವೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ  ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ಚಂದ್ರಕುಮಾರ್, ಸಹಾಯಕ ಕೃಷಿ ನಿರ್ದೇಶಕರು, ಕೆಡಿಪಿ ಸದಸ್ಯರಾದ ನಾಗರಾಜು, ನಂದಿಪುರ ಕಾಂಗ್ರೆಸ್ ಮುಖಂಡರಾದ ಸಿದ್ದೇಶ್, ಕಾಟಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕರಿಯಪ್ಪ,  ದೊಡ್ಡ ಸಿದ್ದವನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ದೇವೇಂದ್ರಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!