Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ | ಸ್ಟೋನ್ ಕ್ರಶರ್ ನಲ್ಲಿ ಕಾರ್ಮಿಕ ಸಾವು..!

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 01 :  ಡ್ರಿಲ್ಲಿಂಗ್ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ  ತಾಲೂಕಿನ ಬಂಡೆಹಟ್ಟಿ ಗ್ರಾಮದಲ್ಲಿ ನಡೆದಿದೆ. 38 ವರ್ಷದ ನಾಗೇಂದ್ರ ಮೃತ ವ್ಯಕ್ತಿ.

ಮೃತ ನಾಗೇಂದ್ರ ಬಂಡೆಹಟ್ಟಿ ಗ್ರಾಮದವರು. ಕೂಲಿ ಕೆಲಸಕ್ಕೆಂದು ಸ್ಟೋನ್ ಕ್ರಷರ್ ಗೆ ಹೋಗುತ್ತಿದ್ದರು. ಡ್ರಿಲ್ಲಿಂಗ್ ವೇಳೆ ಆಯತಪ್ಪಿ ಬಿದ್ದು ನಾಗೇಂದ್ರ ಸಾವನ್ನಪ್ಪಿದ್ದಾರೆ. ಪ್ರತಿ ದಿನ ಎಚ್ಚರಿಕೆಯಿಂದಾನೇ ಕೆಲಸ ಮಾಡುತ್ತಿದ್ದವ ಇಂದು, ಸಾವಿನ ಕದ ತಟ್ಟಿದ್ದಾನೆ. ನಾಗೇಂದ್ರ ಸಾವಿನಿಂದ ಕುಟುಂಬಸ್ಥರು ದುಖತಪ್ತರಾಗಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗೇಂದ್ರ ಕೂಲಿ ಕೆಲಸ ಮಾಡಿಕೊಂಡೆ ಮನೆಯನ್ನು ನೋಡಿಕೊಳ್ಳುತ್ತಿದ್ದರು. ಆದರೆ ಕೂಲಿಗೆ ಹೋದವ ಹೆಣವಾಗಿ ಬಂದರೆ ಮನೆಯವರ ಮನಸ್ಥಿತಿ ಹೇಗಿರಬೇಡ. ನಾಗೇಂದ್ರ ಸಾವಿನಿಂದ ಮನೆಯಲ್ಲಿ ಮೌನ ಆವರಿಸಿದೆ. ಜೀವನ ನಡೆಸಲು ಕೂಲಿ ಮಾಡಲು ಹೋದವ ಜೀವಂತವಾಗಿ ಬರಲೇ ಇಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!