Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಫೋಕ್ಸೋ ಕೇಸ್ : ಯಡಿಯೂರಪ್ಪನವರಿಗೆ ಹೈಕೋರ್ಟ್ ನಿಂದ ಹಳೇ ವಿನಾಯ್ತಿ ಮುಂದುವರಿಕೆ : ಆ.22ಕ್ಕೆ ವಿಚಾರಣೆ..!

---Advertisement---

 

ಬೆಂಗಳೂರು: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಯಡಿಯೂರಪ್ಪ ಅವರಿಗೆ ಹಳೆಯ ವಿನಾಯ್ತಿಯನ್ನೇ ಮುಂದುವರೆಸಿದೆ. ಈ ಮೂಲಕ ಬಂಧನ ಭೀತಿಯಿಂದ ಬಿಎಸ್ವೈ ಮುಕ್ತಿ ಪಡೆದಿದ್ದಾರೆ. ಜೊತೆಗೆ ಯಡಿಯೂರಪ್ಪ ಅವರು ವಿಚಾರಣೆಗೂ ಖುದ್ದು ಹಾಜರಾಗಬೇಕಿಲ್ಲ. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚರಾಣೆ ನಡೆಸಿದ, ನ್ಯಾಯಮೂರ್ತಿ ಎಂ.ನಾಗ ಪ್ರಸನ್ನ ಅವರಿದ್ದ ಪೀಠವೂ ಈ ಆದೇಶ ಹೊರಡಿಸಿದೆ.

ಇನ್ನು ಇದೇ ವೇಳೆ ಅರ್ಜಿದಾರರ ಪರ ವಕೀಲರು ಅರ್ಜಿ ತಿದ್ದುಪಡಿಗಾಗಿ ಮನವಿ ಮಾಡಲಾಗಿದೆ. ಸರ್ಕಾರದಿಂದ ಇದಕ್ಕೆ ಆಕ್ಷೇಪ ಇಲ್ಲದೆ ಇದ್ದಲ್ಲಿ ಕಾಲಾವಕಾಶ ನೀಡಬೇಕೆಂದು ಕೋರಿದ್ದಾರೆ. ಇದಕ್ಕೆ ಪೀಠ ಸರ್ಕಾರಿ ವಕೀಲರನ್ನು ಪ್ರಶ್ನಿಸಿದೆ. ಅರ್ಜಿ ತಿದ್ದುಪಡಿಗೆ ಆಕ್ಷೇಪವಿಲ್ಲವೇ ಎಂದು ಕೇಳಿದೆ. ಸರ್ಕಾರಿ ವಕೀಲರು ಆಕ್ಷೇಪವಿಲ್ಲ ಎಂದು ಕೋರ್ಟ್ ಗೆ ಉತ್ತರ ನೀಡಿದ್ದಾರೆ. ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸಂತ್ರಸ್ತೆಯ ಪರ ವಕೀಲರು ಕೋರಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ.

ಮಾರ್ಚ್ 3ರಂದು ಅಪ್ರಾಪ್ತೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಸಿಐಡಿಗಳು ಯಡಿಯೂರಪ್ಪ ಅವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿ, ಹೇಳಿಕೆಗಳನ್ನು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಸದ್ಯಕ್ಕೆ ದೂರು ಸಲ್ಲಿಸಿದ ಮಹಿಳೆ ಸಾವನ್ನಪ್ಪಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...