Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಆದರ್ಶ ಪತ್ತಿನ ಸಹಕಾರಿ ಸಂಘಕ್ಕೆ ವಾರ್ಷಿಕ 9 ಲಕ್ಷ ನಿವ್ವಳ ಲಾಭ : ಡಿ.ಆರ್.ತಿಪ್ಪೇಸ್ವಾಮಿ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಆದರ್ಶ ಸೌಹಾರ್ದ ಪತ್ತಿನ ಸಹಕಾರಿ ಸಂಘ 2023-24 ನೇ ಸಾಲಿಗೆ 9 ಲಕ್ಷದ 22 ಸಾವಿರದ 511 ರೂ.ಗಳ ಲಾಭದಲ್ಲಿದೆ ಎಂದು ಅಧ್ಯಕ್ಷ ಡಿ.ಆರ್.ತಿಪ್ಪೇಸ್ವಾಮಿ ತಿಳಿಸಿದರು.

ಐಶ್ವರ್ಯ ಫೋರ್ಟ್‌ ನಲ್ಲಿ ನಡೆದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ಸಾಲ ಪಡೆದವರು ಸಕಾಲಕ್ಕೆ ಸಾಲ ಮರು ಪಾವತಿಸಬೇಕು. ಪ್ರತಿಯೊಬ್ಬ ಜಾಮೀನುದಾರರ ಮೇಲೆ ಸಾಲಗಾರರಷ್ಟೆ ಜವಾಬ್ದಾರಿಯಿದೆ. ಜಾಮೀನು ಆಗುವ ಪೂರ್ವದಲ್ಲಿಯೇ ಸಾಲಗಾರನ ವೈಯಕ್ತಿಕ ಸ್ಥಿತಿ, ಸಾಲದ ಉದ್ದೇಶ ಮತ್ತು ಸಾಲ ತೀರಿಸುವ ಸಾಮಥ್ರ್ಯವಿದೆಯೇ ಎನ್ನುವುದನ್ನು ಅರಿತುಕೊಂಡಿರಬೇಕು.

ಸಾಲಗಾರ ಸುಸ್ತಿ ಬಾಕಿದಾರನಾಗಿದ್ದರೆ ಅದನ್ನು ತೀರಿಸುವ ಹೊಣೆ ಜಾಮೀನುದಾರನ ಮೇಲಿರುತ್ತದೆ. ಸಹಕಾರಿಗೆ ಧಕ್ಕೆ ಬಾರದಂತೆ ಸಾಲವನ್ನು ಮರುಪಾವತಿ ಮಾಡಿಸಬೇಕು. ಸದಸ್ಯರುಗಳಿಗೆ ಶೇ.20 ರಷ್ಟು ಡಿವಿಡೆಂಟ್ ನೀಡಲಾಗುವುದೆಂದು ಹೇಳಿದರು.

ಸಿ.ಎಂ.ಡಿ.ತೆರಿಗೆ ವೆಚ್ಚ, ಪೀಠೋಪಕರಣಗಳ ಸವಕಳಿ, ಕಂಪ್ಯೂಟರ್ ಮತ್ತು ಸಾಫ್ಟ್‍ವೇರ್ ನಿರ್ವಹಣೆ, ಲೆಕ್ಕ ಪರಿಶೋಧನಾ ಶುಲ, ಲಾಕರ್ ಬಾಡಿಗೆ, ನಿವ್ವಳ ಲಾಭ
ಸಾಲಗಳ ಮೇಲಿನ ಬಡ್ಡಿ, ಠೇವಣಿಗಳ ಮೇಲೆ ಬಂದ ಬಡ್ಡಿ, ಸುಸ್ತಿ ಬಡ್ಡಿ ಇನ್ನು ಮುಂತಾದ ವಿಚಾರಗಳ ಕುರಿತು ಮಹಾಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯ ಆರಂಭದಲ್ಲಿ ಮೃತ ಸದಸ್ಯರುಗಳಿಗೆ ಸಂತಾಪ ಸೂಚಿಸಲಾಯಿತು.

ಆದರ್ಶ ಸೌಹಾರ್ಧ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಎಸ್.ವೇದಮೂರ್ತಿ, ನಿರ್ದೇಶಕರುಗಳಾದ ಜೆ.ಮಧುಸೂದನ, ಚಂದ್ರಶೇಖರ್, ಎ.ಎಸ್.ಮಲ್ಲಿಕಾರ್ಜುನಸ್ವಾಮಿ
ಜಿ.ಎ.ಪ್ರಸನ್ನಕುಮಾರ್, ಎಂ.ಕೆ.ಮಲ್ಲಿಕಾರ್ಜುನ್, ಎಸ್.ಮೂರುಕಣ್ಣಪ್ಪ, ಎಂ.ವೆಂಕಟೇಶ್, ಕೆ.ರಾಜೇಶ್, ಶ್ರೀಮತಿ ಎಸ್.ಜೆ.ಶ್ವೇತ, ಶ್ರೀಮತಿ ಎಂ.ಜಿ.ಸರ್ವಮಂಗಳ ವೇದಿಕೆಯಲ್ಲಿದ್ದರು. ಸರ್ವ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...