Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಆದರ್ಶ ಪತ್ತಿನ ಸಹಕಾರಿ ಸಂಘಕ್ಕೆ ವಾರ್ಷಿಕ 9 ಲಕ್ಷ ನಿವ್ವಳ ಲಾಭ : ಡಿ.ಆರ್.ತಿಪ್ಪೇಸ್ವಾಮಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಆದರ್ಶ ಸೌಹಾರ್ದ ಪತ್ತಿನ ಸಹಕಾರಿ ಸಂಘ 2023-24 ನೇ ಸಾಲಿಗೆ 9 ಲಕ್ಷದ 22 ಸಾವಿರದ 511 ರೂ.ಗಳ ಲಾಭದಲ್ಲಿದೆ ಎಂದು ಅಧ್ಯಕ್ಷ ಡಿ.ಆರ್.ತಿಪ್ಪೇಸ್ವಾಮಿ ತಿಳಿಸಿದರು.

ಐಶ್ವರ್ಯ ಫೋರ್ಟ್‌ ನಲ್ಲಿ ನಡೆದ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ಸಾಲ ಪಡೆದವರು ಸಕಾಲಕ್ಕೆ ಸಾಲ ಮರು ಪಾವತಿಸಬೇಕು. ಪ್ರತಿಯೊಬ್ಬ ಜಾಮೀನುದಾರರ ಮೇಲೆ ಸಾಲಗಾರರಷ್ಟೆ ಜವಾಬ್ದಾರಿಯಿದೆ. ಜಾಮೀನು ಆಗುವ ಪೂರ್ವದಲ್ಲಿಯೇ ಸಾಲಗಾರನ ವೈಯಕ್ತಿಕ ಸ್ಥಿತಿ, ಸಾಲದ ಉದ್ದೇಶ ಮತ್ತು ಸಾಲ ತೀರಿಸುವ ಸಾಮಥ್ರ್ಯವಿದೆಯೇ ಎನ್ನುವುದನ್ನು ಅರಿತುಕೊಂಡಿರಬೇಕು.

ಸಾಲಗಾರ ಸುಸ್ತಿ ಬಾಕಿದಾರನಾಗಿದ್ದರೆ ಅದನ್ನು ತೀರಿಸುವ ಹೊಣೆ ಜಾಮೀನುದಾರನ ಮೇಲಿರುತ್ತದೆ. ಸಹಕಾರಿಗೆ ಧಕ್ಕೆ ಬಾರದಂತೆ ಸಾಲವನ್ನು ಮರುಪಾವತಿ ಮಾಡಿಸಬೇಕು. ಸದಸ್ಯರುಗಳಿಗೆ ಶೇ.20 ರಷ್ಟು ಡಿವಿಡೆಂಟ್ ನೀಡಲಾಗುವುದೆಂದು ಹೇಳಿದರು.

ಸಿ.ಎಂ.ಡಿ.ತೆರಿಗೆ ವೆಚ್ಚ, ಪೀಠೋಪಕರಣಗಳ ಸವಕಳಿ, ಕಂಪ್ಯೂಟರ್ ಮತ್ತು ಸಾಫ್ಟ್‍ವೇರ್ ನಿರ್ವಹಣೆ, ಲೆಕ್ಕ ಪರಿಶೋಧನಾ ಶುಲ, ಲಾಕರ್ ಬಾಡಿಗೆ, ನಿವ್ವಳ ಲಾಭ
ಸಾಲಗಳ ಮೇಲಿನ ಬಡ್ಡಿ, ಠೇವಣಿಗಳ ಮೇಲೆ ಬಂದ ಬಡ್ಡಿ, ಸುಸ್ತಿ ಬಡ್ಡಿ ಇನ್ನು ಮುಂತಾದ ವಿಚಾರಗಳ ಕುರಿತು ಮಹಾಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯ ಆರಂಭದಲ್ಲಿ ಮೃತ ಸದಸ್ಯರುಗಳಿಗೆ ಸಂತಾಪ ಸೂಚಿಸಲಾಯಿತು.

ಆದರ್ಶ ಸೌಹಾರ್ಧ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಎಸ್.ವೇದಮೂರ್ತಿ, ನಿರ್ದೇಶಕರುಗಳಾದ ಜೆ.ಮಧುಸೂದನ, ಚಂದ್ರಶೇಖರ್, ಎ.ಎಸ್.ಮಲ್ಲಿಕಾರ್ಜುನಸ್ವಾಮಿ
ಜಿ.ಎ.ಪ್ರಸನ್ನಕುಮಾರ್, ಎಂ.ಕೆ.ಮಲ್ಲಿಕಾರ್ಜುನ್, ಎಸ್.ಮೂರುಕಣ್ಣಪ್ಪ, ಎಂ.ವೆಂಕಟೇಶ್, ಕೆ.ರಾಜೇಶ್, ಶ್ರೀಮತಿ ಎಸ್.ಜೆ.ಶ್ವೇತ, ಶ್ರೀಮತಿ ಎಂ.ಜಿ.ಸರ್ವಮಂಗಳ ವೇದಿಕೆಯಲ್ಲಿದ್ದರು. ಸರ್ವ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!