Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೀಸಲಾತಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು : 40 ವರ್ಷಗಳ ಸುದೀರ್ಘ ಕಠಿಣ ಹೋರಾಟಕ್ಕೆ ಸಿಕ್ಕ ಪ್ರತಿಫಲ : ಹರಳಯ್ಯ ಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಒಳ ಮೀಸಲಾತಿ ನೀಡುವ ಅಧಿಕಾರ ಆಯಾ ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದನ್ನು ಹರಳಯ್ಯ ಸ್ವಾಮೀಜಿ ಸ್ವಾಗತಿಸಿದ್ದಾರೆ.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸ್ವಾಮೀಜಿ ಒಳ ಮೀಸಲಾತಿಗಾಗಿ ಕಳೆದ ಮೂವತ್ತು ನಲವತ್ತು ವರ್ಷಗಳಿಂದಲೂ ವಿವಿಧ ಸಂಘಟನೆಗಳು, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಹಾಗೂ ಅನೇಕ ಮಠಾಧೀಶರುಗಳು ನಡೆಸಿದ ಹೋರಾಟಕ್ಕೆ ಸುಪ್ರಿಂ ಕೊರ್ಟ್ ತೀರ್ಪು ಶಕ್ತಿ ತುಂಬಿದಂತಿದೆ. ಪಾದಯಾತ್ರೆ, ಸೈಕಲ್ ಜಾಥ, ಅರೆಬೆತ್ತಲೆ ಮೆರವಣಿಗೆ, ಪಂಜಿನ ಮೆರವಣಿಗೆ ಡಿ.ಸಿ.ಕಚೇರಿಗೆ ಮುತ್ತಿಗೆ, ಶಾಸಕರ ಮನೆ ಎದುರು ಧರಣಿ, ಮೈಮೇಲೆ ಮಲ ಸುರಿದುಕೊಂಡಿರುವ ಪ್ರಕರಣಗಳು ಅಲ್ಲಲ್ಲಿ ಜರುಗಿದೆ. ಕಠಿಣ ಹೋರಾಟಕ್ಕೆ ಸಿಕ್ಕ ಪ್ರತಿಫಲ. ರಾಜ್ಯದ ಮುಖ್ಯಮಂತ್ರಿ ತಡ ಮಾಡದೆ ಸುಪ್ರೀಂ ಕೋರ್ಟ್ ತೀರ್ಪಿನನ್ವಯ ಆದೇಶ ಹೊರಡಿಸಬೇಕು. ಇಲ್ಲವಾದಲ್ಲಿ ರೊಚ್ಚಿಗೇಳಬೇಕಾಗುತ್ತದೆಂದು ಎಚ್ಚರಿಸಿದರು.

ಹನುಮಂತಪ್ಪ ದುರ್ಗ ಮಾತನಾಡಿ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಪರಿಶಿಷ್ಟ ಜಾತಿಯಲ್ಲಿನ ಅಸ್ಪøಶ್ಯರನ್ನು ಗುರಿತಿಸಿ ಆಯಾ ಜಾತಿಗೆ ಅನುಗುಣವಾಗಿ ಮೀಸಲಾತಿ ನೀಡುವಂತೆ ಆಯಾ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಪ್ರೀಂ ಕೋರ್ಟ್ ತೀರ್ಪಿನಂತೆ ಆದೇಶ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.
ನಗರಂಗೆರೆ ದೇವರಾಜ್, ನ್ಯಾಯವಾದಿ ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!