Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಿನಗೂಲಿ ನೌಕರನಾಗಿದ್ದವ ಅಧಿಕಾರಿಯಾಗಿ ಬಡ್ತಿ : ಅಕ್ರಮ ನೇಮಕವೆಂದು ತೋಟಗಾರಿಕಾ ಅಧಿಕಾರಿ ವಜಾ..!

---Advertisement---

ಹಾವೇರಿ: ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ನೇಮಕವಾಗಿದ್ದ ಅಧಿಕಾರಿಯನ್ನು ವಜಾಗೊಳಿಸಲಾಗಿದೆ. ಬಸವರಾಜಪ್ಪ ನಿಂಗಪ್ಪ ಬರೇಗಾರ ಹಾವೇರಿ ತೋಟಗಾರಿಕಾ ಇಲಾಖೆಯಲ್ಲಿ ಸಹಾಯಕ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಇವರ ನೇಮಕಾತಿಯೇ ಅಕ್ರಮವೆಂದು ತಿಳಿದ ಮೇಲೆ ವಜಾಗೊಳಿಸಲಾಗಿದೆ.

ಬಸವರಾಜಪ್ಪ ಮೇಲೆ ದೂರುಗಳು ಬಂದಿದ್ದವು. ಈ ದೂರನ್ನ ಪರಿಶೀಲನೆ ನಡೆಸಲಾಗಿತ್ತು. ಸಮಿತಿಯು ಈ ಸಂಬಂಧ ಪರಿಶೀಲನೆ ನಡೆಸಿ, ವರದಿ ನೀಡಿತ್ತು. ಬಸವರಾಜಪ್ಪ ನಿಯಮಬಾಹಿರವಾಗಿ ನೇಮಕಾತಿಗೊಂಡಿರುವುದು ವರದಿಯಲ್ಲಿ ಬಹಿರಂಗವಾದ ಮೇಲೆ ತೋಟಗಾರಿಕಾ ನಿರ್ದೇಶಕರು ವಜಾಗೊಳಿಸಿ, ಆದೇಶ ಹೊರಡಿಸಿದ್ದಾರೆ. ಬಸವರಾಜಪ್ಪ ಈ ಮೊದಲು ತೋಟಗಾರಿಕಾ ಇಲಾಖೆಯಲ್ಲಿಯೇ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು. ಆ ಬಳಿಕ ಹಾವೇರಿಯ ತೋಟಗಾರಿಕಾ ಇಲಾಕಲೆಯ ಅಧಿಕಾರಿಯಾಗಿ ಬಡ್ತಿ ಪಡೆದಿದ್ದರು. ಈ ನೇಮಕಾತಿ ಅಕ್ರಮ ಎಂದು ವರದಿಯಲ್ಲಿ ತಿಳಿದು ಬಂದಿದೆ..

1981ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಬಸವರಾಜಪ್ಪ ಕೆಲಸ ಮಾಡುತ್ತಿದ್ದರು ಎಂಬುದಾಗಿ ಸುಳ್ಳು ದಾಖಲೆಯನ್ನು ಸೃಷ್ಟಿಸಿದ್ದರು. ಈ ಮೂಲಕ 1992ರಿಂದ ತೋಟಗಾರಿಕಾ ಅಧಿಕಾರಿಯಾಗಿ ನೇಮಕಗೊಂಡರು. 2012ರಲ್ಲಿ ಮುಂಬಡ್ತಿ ಕೂಡ ನೀಡಿದ್ದರು. 1981ರಿಂದ 1991ರವರೆಗೆ ದಿನಗೂಲಿ ನೌಕರನಾಗಿ ಕೆಲಸ ಮಾಡಿರುವುದಾಗಿ ದಾಖಲೆ ನೀಡಿದ್ದರು. ಆದರೆ, ಆ ಅವಧಿಯಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ರೆಗ್ಯುಲರ್‌ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದರು ಎಂಬುವುದು ದೃಢಪಟ್ಟಿದೆ.

 

10 ವರ್ಷಗಳ ನಿರಂತರ ಸೇವೆ ಪೂರೈಸದೆ ಸಕ್ರಮಾತಿ ಷರತ್ತುಗಳನ್ನು ಉಲ್ಲಂಘಿಸಿ ನೇಮಕವಾಗಿರುವುದು ಸಮಿತಿ ಪರಿಶೀಲನೆ ವೇಳೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಹಾವೇರಿ ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜಪ್ಪ ನಿಂಗಪ್ಪ ಬರೇಗಾರ ಅವರನ್ನು ಇಲಾಖೆ ನಿರ್ದೇಶಕರು ಸೇವೆಯಿಂದ ವಜಾಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment