ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.04 : ವಿಶ್ವಹಿಂದು ಪರಿಷತ್, ಭಜರಂಗದಳದ ನೇತೃತ್ವದಲ್ಲಿ ಪ್ರತಿ ವರ್ಷವೂ ಪ್ರತಿಷ್ಠಾಪಿಸಲಾಗುವ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಗೆ ಅಧ್ಯಕ್ಷರಾಗಿ ಸಾಯಿ ಮೊಬೈಲ್ನ ನಯನ್ ಬಿ. ಆಯ್ಕೆಯಾಗಿದ್ದಾರೆ.
ಸಮಿತಿಯ ಮಾರ್ಗದರ್ಶಕರಾಗಿ ಟಿ.ಭದ್ರಿನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಐಶ್ವರ್ಯ ಫೋರ್ಟ್ನ ಶರಣ್ಕುಮಾರ್, ಖಜಾಂಚಿಯಾಗಿ ಕಾವೇರಿ ವಾಟರ್ನ ಅಜಿತ್, ಉಪಾಧ್ಯಕ್ಷರಾಗಿ ಪ್ರಶಾಂತ್ ಅಪ್ಪಾಜಿ ಪರಿಸರ, ಶ್ರೀರಂಗ ಗ್ರಾನೈಟ್ನ ಚೇತನ್ಬಾಬು, ಕಾರ್ಯದರ್ಶಿಯಾಗಿ ನಗರಸಭೆ ಸದಸ್ಯ ಶಶಿಧರ್, ಬಿ.ವಿ.ಕೆ.ಎಸ್. ಲೇಔಟ್ ಮಾಲೀಕ ಕಾರ್ತಿಕ್, ಸಂಚಾಲಕರಾಗಿ ಬಜರಂಗದಳ ಕರ್ನಾಟಕ ಪ್ರಾಂತ ಸಂಯೋಜಕ ಪ್ರಬಂಜನ್, ಸಹ ಸಂಚಾಲಕರಾಗಿ ಬಜರಂಗದಳ ಜಿಲ್ಲಾ ಸಂಯೋಜಕ ಸಂದೀಪ್, ವಿ.ಹೆಚ್.ಪಿ. ನಗರ ಉಪಾಧ್ಯಕ್ಷ ರಂಗಸ್ವಾಮಿ
ಸೇರಿದಂತೆ ನಲವತ್ತಕ್ಕೂ ಹೆಚ್ಚು ಸಮಿತಿ ಸದಸ್ಯರುಗಳನ್ನು ಒಳಗೊಂಡಂತೆ ನೂತನ ಸಮಿತಿ ರಚಿಸಲಾಗಿದೆ.
ಪೂಜಾ ಸಮಿತಿ, ಪ್ರಸಾದ ಸಮಿತಿ, ಸ್ವಚ್ಚತಾ ಸಮಿತಿ, ಕಾರ್ಯಕ್ರಮ ಸಮಿತಿ, ಪ್ರಚಾರ ಸಮಿತಿ, ಶೋಭಾ ಯಾತ್ರೆ ಸಮಿತಿ ಹಾಗೂ ಇತರೆ ಉಪ ಸಮಿತಿಗಳನ್ನು ರಚಿಸಿ ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿಯನ್ನು ವಹಿಸಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್