Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯೂನಿಯನ್ ಬ್ಯಾಂಕ್ ಹಗರಣ : ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಶಿವರಾಮೇಗೌಡ..!

Facebook
Twitter
Telegram
WhatsApp

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಮೂಡಾ ಹಗರಣ‌ ಹಾಗೂ ವಾಲ್ಮೀಕಿ ಹಗರಣ ಸಾಕಷ್ಟು ಸದ್ದು ಮಾಡ್ತಾ ಇದೆ. ಇದರ ನಡುವೆ ಯೂನಿಯನ್ ಬ್ಯಾಂಕ್ ಹಗರಣ ಸಂಬಂಧ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ನಾಯಕ ಎಲ್.ಆರ್.ಶಿವರಾಮೇಗೌಡ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

ಯೂನಿಯನ್ ಬ್ಯಾಂಕ್ ಗೆ 20 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಶಿವರಾಮೇಗೌಡರು ಬಂಧನದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಕೋರ್ಟ್ ಗೆ ಇಂದು ನಿರೀಕಗಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಸೂಚಿಸಿದ ಕೋರ್ಟ್ ವಿಚಾರಣೆಯನ್ನು ಆಗಸ್ಟ್ 7 ಕ್ಕೆ ಮುಂದೂಡಿದೆ. ಜಮೀನು ಮಾಲೀಕರೊಂದಿಗೆ ಸೇರಿ ಬ್ಯಾಂಕ್ ಗಳಿಂದ 32 ಕೋಟಿ ರೂಪಾಯಿ ಪಡೆದುಕೊಳ್ಳಲಾಗಿದೆ. ಶಾಲೆಯ ಬಾಡಿಗೆ ಹಣವನ್ನು ಬ್ಯಾಂಕ್ ಗೆ ನೀಡುವುದಾಗಿ ಒಡಂಬಡಿಕೆ ಮಾಡಲಾಗಿದೆ.

ಇನ್ನು ಎಲ್.ಆರ್.ಶಿವರಾಮೇಗೌಡ ರಾಯಲ್ ಕಾನ್​ಕಾರ್ಡ್ ಸಂಸ್ಥೆಯ ಟ್ರಸ್ಟಿ ಆಗಿದ್ದು, ವರ್ತೂರಿನ ಅಂಬಲೀಪುರದ ಜಮೀನಿನ ಮೇಲೆ ಮಾಲೀಕರು ಸಾಲ ಪಡೆದಿದ್ದಾರೆ. ಒಪ್ಪಂದದಂತೆ ಸಾಲ ತೀರಿಸದೇ ಇದ್ದಾಗ ವಂಚನೆ ಆರೋಪದಡಿ ಸಿಬಿಐ ಕೇಸ್​ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಹಗರಣ ಸಂಬಂಧ ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ನಾಯಕ ಎಲ್.ಆರ್.ಶಿವರಾಮೇಗೌಡ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಈಗಾಗಲೇ ಶಿವರಾಮೇಗೌಡ ಅವರು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ವಂಚನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ಈಗ ಯೂನಿಯನ್ ಬ್ಯಾಂಕ್ ಹಗರಣದಲ್ಲೂ ಅರ್ಜಿ ಹಾಕಿದ್ದು, ಜಾಮೀನು ಅರ್ಜಿಯ ವಿಚಾರಣೆಯ ಬಳಿಕ ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!