ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕರ್ನಾಟಕದಾದ್ಯಂತ ಕಳೆದ ಕೆಲವು ದಿನಗಳಿಂದ ಬೆಂಬಿಡದೆ ಮಳೆ ಸುರಿಯುತ್ತಿದೆ. ಹಲವು ಕಡೆ ಬೆಳೆ ಹಾನಿಯಾಗಿದೆ, ಜೀವ ಹಾನಿಯಾಗಿದೆ, ಮನೆಗಳು ಕುಸಿತಗೊಂಡಿವೆ. ಇನ್ನು ಮೂರು ದಿನಗಳ ಕಾಲ ಮಳೆ ಬೆಂಬಿಡದೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಬೆಂಗಳೂರು ಸೇರಿ ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದ ಕೆಲವು ಭಾಗಗಳಲ್ಲಿಯೂ ಇಂದಿನಿಂದ ಮೂರು ದಿನಗಳ ಕಾಲ ಜೋರು ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಈಗಾಗಲೇ ಕಳೆದ ಮೂರು ದಿನದಿಂದ ಮಳೆಯ ಆರ್ಭಟ ನಿಂತಿಲ್ಲ. ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗುವುದಿಲ್ಲ. ಈಗಾಗಲೇ ತಂಪು ಗಾಳಿ ಬೀಸುತ್ತಿದ್ದು, ಸಂಜೆ ವೇಳೆಗೆ ಜೋರು ಮಳೆಯಾಗಲಿದೆ. ಹೀಗಾಗಿ ನಗರದಲ್ಲಿ ಹೊರಗೆ ಹೋಗುವವತು ಕೊಂಚ ಎಚ್ಚರವಹಿಸಬೇಕಾಗಿದೆ. ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಹೊರಗೆ ಹೋಗಿವುದು ಉತ್ತಮ.
ಮಳೆ ಜೋರು ಬಂದರೆ ಕೋಟೆ ನಾಡಿನ ಜನರಿಗೆ ಗುಡ್ಡ ಕುಸಿತದ ಭಯ ಶುರುವಾಗಿದೆ. ಚಿತ್ರದುರ್ಗದ ಸುತ್ತಮುತ್ತಲಿನ ಗುಡ್ಡ ಕಡಿದು ಲೇಔಟ್ ಗಳನ್ನಾಗಿ ಮಾಡಲಾಗಿದೆ. ಇದರಿಂದಾಗಿ ನಗರದ ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಧವಳಗಿರಿಯ ಬಡಾವಣೆ ಸೇರಿ ಹಲವಡೆ ಗುಡ್ಡ ಕಡಿತ ಉಂಟಾಗಿದೆ. ಅಪಾಯದ ಮಟ್ಟಕ್ಕೆ ಗುಡ್ಡ ಕಡಿಯುತ್ತಿರುವ ಕಾರಣ ಸ್ಥಳೀಯರು ಕಿಡಿಕಾರಿದ್ದಾರೆ. ಮಳೆ ಬರುತ್ತಿರುವ ಕಾರಣ ಮಣ್ಣಿನ ಸವೆತ ಉಂಟಾಗುತ್ತಿದೆ. ಜೋರು ಮಳೆ ಬಂದರೆ ಇನ್ನಷ್ಟು ಅಪಾಯ ಎದುರಾಗಬಹುದೆಂಬ ಆತಂಕ ಸ್ಥಳೀಯರನ್ನು ಕಾಡುತ್ತಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್