Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ಧರಾಮಯ್ಯರಂತ ಕೆಟ್ಟ ಸರ್ಕಾರ ಯಾವುದೂ ಇಲ್ಲ : ಚಿತ್ರದುರ್ಗದಲ್ಲಿ ಚಲವಾದಿ ನಾರಾಯಣಸ್ವಾಮಿ ಆಕ್ರೋಶ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 06 : ಸಿಐಡಿ ತನಿಖೆ ರಾಜ್ಯ ಸರ್ಕಾರ ನೀಡಿದ ವರದಿಯಲ್ಲೇನಿದೆ ಗೊತ್ತಿಲ್ಲ. ಪರಶುರಾಮ್ ಕುಟುಂಬಕ್ಕೆ ಅನ್ಯಾಯ ಆಗಿದೆ. ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಚಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು, ಜಾತಿ ಮತ್ತು ಕಷ್ಟ PSI ಪರಶುರಾಮ್ ಬಲಿ ಪಡೆದಿದೆ. ಯಾದಗಿರಿ MLA ಮತ್ತು ಪುತ್ರಗೆ 20ಲಕ್ಷ ರೂಪಾಯಿ ಕೊಟ್ಟಿದ್ದನು. 7 ತಿಂಗಳಿಗೆ ಮತ್ತೆ 30 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದರು. 20 ಲಕ್ಷ ಕೊಟ್ಟ ದುಡ್ಡು ಕೇಳಲು ಹೋದಾಗ ಬೈದು ಜಾತಿನಿಂದನೆ ಮಾಡಿದ್ದಾರಂತೆ. ಸಿದ್ಧರಾಮಯ್ಯ ಆಡಳಿತ ಸರಿಯಿದ್ದರೆ ಹೀಗಾಗುತ್ತಿರಲಿಲ್ಲ ಶಾಸಕರಿಗೆ ಅಭಿವೃದ್ಧಿಗೆ 1 ರೂಪಾಯಿ ಕೊಟ್ಟಿಲ್ಲ. ಶಾಸಕರು ಅಧಿಕಾರಿಗಳನ್ನು ಹಿಡಿದುಕೊಳ್ಳುವ ಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ.

ಶಾಸಕರು ಆಫೀಸರ್ಸ್ ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ಧರಾಮಯ್ಯರಂತ ಕೆಟ್ಟ ಸರ್ಕಾರ ಯಾವುದೂ ಇಲ್ಲ. ತಮ್ಮ ಕಣಜ ತುಂಬಿಕೊಳ್ಳುವದರ ಬಗ್ಗೆ ಯೋಚಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರದಲ್ಲಿ ಸಿದ್ಧರಾಮಯ್ಯ ಸರ್ಕಾರ ಸಿಲುಕಿದೆ. ಎಸ್ ಐಟಿ, ಸಿಐಡಿ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದಾರೆ.

ರಾಜಕಾರಣಿಗಳಿಗೆ ಜನ ಅಟ್ಟಿಸಿಕೊಂಡು ಬರುವ ಸ್ಥಿತಿ ಬರುತ್ತದೆ. ಮತ ಬ್ಯಾಂಕ್ ಸೆಳೆಯಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಿತ್ತು. ಮೀನು ಕೊಡುವುದು ಬೇಡ ಮೀನು ಹಿಡಿಯಲು ಕಲಿಸಿ. ಎಸ್ಸಿಪಿಟಿಎಸ್ ಪಿಗೆ ಮೀಸಲಿದ್ದ ದಲಿತರ ಹಣವನ್ನು ಸರ್ಕಾರ ಬಳಸಿದೆ. ಸಿದ್ಧರಾಮಯ್ಯ ಸರ್ಕಾರ ಮೋಸ ವಂಚನೆಗೆ ಹೆಸರಾಗಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಲೂಟಿಯಲ್ಲಿ ತೊಡಗಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment