Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ಬಿಜೆಪಿ ಮುಖಂಡ ಬಿಜಾಪುರದಲ್ಲಿ ಅರೆಸ್ಟ್..!

Facebook
Twitter
Telegram
WhatsApp

ಶಿವಮೊಗ್ಗ: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡ ಬಿಜಾಪುರದಲ್ಲಿ ಅರೆಸ್ಟ್ ಆಗಿದ್ದಾರೆ. ಶರತ್ ಕಲ್ಯಾಣಿ ಬಂಧಿತ ಆರೋಪಿಯಾಗಿದ್ದಾರೆ. ಇವರು ಬಿಜೆಪಿಯ ಸೋಷಿಯಲ್ ಮೀಡಿಯಾ ಸಂಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಶರತ್ ಕಲ್ಯಾಣಿ 42 ವರ್ಷದ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು. ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಬೇಳೆಸಿದ್ದ ಆರೋಪ ಕೇಳಿ ಬಂದಿತ್ತು. ದೂರು ದಾಖಲಾಗುತ್ತಿದ್ದಂತೆ ಶರತ್ ಕಲ್ಯಾಣಿ ತಲೆ‌ಮರೆಸಿಕೊಂಡಿದ್ದರು. ಸದ್ಯ ಪೊಲೀಸರು ಪತ್ತೆ ಹಚ್ಚಿದ್ದು ಬಿಜಾಪುರದಲ್ಲಿ ಲಾಕ್ ಆಗಿದ್ದಾರೆ.

ಒಂದು ವಾರದಿಂದ ಕಾಣಿಸದೆ ನಾಪತ್ತೆಯಾಗಿದ್ದರು. ಕಡೆಗೂ ಪೊಲೀಸರು ತಮ್ಮ ಕಾಂಟ್ಯಾಕ್ಟ್ ಗಳನ್ನ ಬಳಸಿ, ತಮ್ಮ ಬುದ್ದಿವಂತಿಕೆ ಉಪಯೋಗಿಸಿ ಶರತ್ ಕಲ್ಯಾಣಿಯನ್ನ ಹಿಡಿದಿದ್ದಾರೆ. ಶಿವಮೊಗ್ಗದ ಮಹಿಳಾ ಪೊಲೀಸರು ಆತನ ಕೈಗೆ ಕೋಳ ತೊಡಿಸಿದ್ದಾರೆ.

ಜುಲೈ 26ರಂದು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರೀತಿ ನಾಟಕವಾಡಿ, ನಂಬಿಸಿದ್ದ, ವಂಚನೆ ಕೇಸು ಒಂದು ಕಡೆಯಾದರೆ, ನಾಲ್ಕು ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ ಮಹಿಳಾ ಪೊಲೀಸರು ಈತ‌ನನ್ನು ಎಲ್ಲಿಯೇ ಅಡಗಿದ್ದರು ಬಿಡದೇ, ಅರೆಸ್ಟ್ ಮಾಡಿದ್ದಾರೆ. ಬಿಜೆಪಿಯ ಸೋಷಿಯಲ್ ಮೀಡಿಯಾದ ಸಂಚಾಲಕರಾಗಿ, ಬೇರೊಬ್ಬರಿಗೆ ಮೋಸ ಮಾಡಿದ್ದಾನೆ. ವಿಚ್ಚೇಧಿತ ಮಹಿಳೆಗೆ ಬಣ್ಣ ಬಣ್ಣದ ಮಾತುಗಳನ್ನಾಡಿ, ಮದುವೆ ಆಗಿಯೇ ಬಿಡುತ್ತೇನೆಂದು ನಂಬಿಸಿದ್ದಾನೆ. ಈತ ಹೇಳಿದ್ದೆಲ್ಲ ಸುಳ್ಳು, ಮದುವೆಯಾಗುವುದು ಸುಳ್ಳು ಎಂದು ತಿಳಿದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ತಲೆಮರೆಸಿಕೊಂಡಿದ್ದವನನ್ನು ಕರೆತಂದು, ವಿಚಾರಣೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!