Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ನಿಜಲಿಂಗಪ್ಪನವರ 25 ನೇ ವರ್ಷದ ಪುಣ್ಯಸ್ಮರಣೆ : ಇಂದಿನ ಯುವ ಪೀಳಿಗೆಗೆ ಅವರ ತತ್ವ ಆದರ್ಶ ತಿಳಿಸಬೇಕಿದೆ : ಮಾದಾರ ಚನ್ನಯ್ಯ ಸ್ವಾಮೀಜಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 08  : ರಾಷ್ಟ್ರ ನಾಯಕ, ಹಿರಿಯ ಮುತ್ಸದಿ ಎಸ್.ನಿಜಲಿಂಗಪ್ಪನವರ ತತ್ವಾರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಬೇಕಿದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಸೀಬಾರ ಸಮೀಪವಿರುವ ಸ್ಮಾರಕದಲ್ಲಿ ಗುರುವಾರ ನಡೆದ ಎಸ್.ನಿಜಲಿಂಗಪ್ಪನವರ 25 ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಅವರ ಭಾಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಪ್ರಪಂಚದ ಅಕ್ಕಪಕ್ಕದ ದೇಶಗಳಲ್ಲಿ ನಡೆಯುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಬಾಂಗ್ಲಾದಲ್ಲಿ ಮೀಸಲಾತಿಗಾಗಿ ಭುಗಿಲೆದ್ದಿರುವ ಹಿಂಸಾಚಾರದಿಂದ ಅರಾಜಗಕತೆಯುಂಟಾಗಿರುವುದಕ್ಕೆ ಮಾರ್ಗದರ್ಶನದ ಕೊರತೆ ಕಾರಣ. ನಮ್ಮ ದೇಶದಲ್ಲಿ ಆಧ್ಯಾತ್ಮ, ಸಂಸ್ಕಾರದ ಶಿಕ್ಷಣವಿದೆ. ನಿಷ್ಕಳಂಕ ರಾಜಕಾರಣಿಯಾಗಿದ್ದ ಎಸ್.ಎನ್.ರವರ ಭವಿಷ್ಯ ಭಾರತದ ದೃಷ್ಟಿಯಿಂದ ಅವರಲ್ಲಿದ್ದ ಚಿಂತನೆಗಳನ್ನು ಎಲ್ಲರಿಗೂ ತಿಳಿಸಬೇಕಿದೆ. ಇಲ್ಲಿ ಶಾಸಕರಿಗೆ, ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಶಿಬಿರಕ್ಕೆ ಶೀಘ್ರ ಚಾಲನೆ ಕೊಡಬೇಕಾಗಿರುವುದರಿಂದ ಸರ್ಕಾರ ಮತ್ತು ಜಿಲ್ಲಾಡಳಿತ ಸಹಕಾರ ಮುಖ್ಯ ಎಂದು ತಿಳಿಸಿದರು.

ಎಸ್.ಎನ್. ಸ್ಮಾರಕದ ಕಂಬಗಳು ಒಂದವರೆ ದಶಕದಿಂದ ಶಿಥಿಲಗೊಂಡಿವೆ. ಅನಾಹುತ ಸಂಭವಿಸುವ ಮುನ್ನ ಸರ್ಕಾರ ಜಿಲ್ಲಾಡಳಿತ ಎಚ್ಚೆತ್ತುಕೊಂಡು ರಿಪೇರಿ ಮಾಡಿಸಬೇಕೆಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮನವಿ ಮಾಡಿದರು.

ಎಸ್.ಎನ್.ಸ್ಮಾರಕ ಟ್ರಸ್ಟ್ ಗೌರವ ಕಾರ್ಯದರ್ಶಿ ಹೆಚ್.ಹನುಮಂತಪ್ಪ, ಟ್ರಸ್ಟಿಗಳಾದ ಕೆ.ಇ.ಬಿ.ಷಣ್ಮುಖಪ್ಪ, ಎಂ.ಕೆ.ತಾಜ್‍ಪೀರ್, ರೋಟರಿ ಕ್ಲಬ್ ಅಧ್ಯಕ್ಷ ಜಿ.ಎನ್.ವೀರಣ್ಣ ರೊ.ವೀರಭದ್ರಸ್ವಾಮಿ, ರೊ.ಎಸ್.ವೀರೇಶ್, ಜಿ.ಎಂ.ಪ್ರಕಾಶ್, ನಾಗರಾಜ್ ಸಂಗಮ್, ಎಂ.ಕೆ.ಹಟ್ಟಿಯಲ್ಲಿರುವ ಬಸವೇಶ್ವರ ವಿದ್ಯಾಸಂಸ್ಥೆ ಹಾಗೂ ಮಹಿಳಾ ಸಹಾಯವಾಣಿ ಸಾಂತ್ವನ ಕೇಂದ್ರದ ಕಾರ್ಯದರ್ಶಿ ಶಂಕರಪ್ಪ ವಿ.ಕೆ. ತಮಟಕಲ್ಲು ಕರಿಬಸಪ್ಪ, ಧನಂಜಯ ಲಕ್ಷ್ಮಿಸಾಗರ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಯಣ್ಣ ಸೇರಿದಂತೆ ವಿಶ್ವಮಾನವ ಶಾಲೆಯ ನೂರಾರು ಮಕ್ಕಳು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment