Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿನ್ನದ ಪದಕ ಮಿಸ್.. ನೀರಜ್ ಚೋಪ್ರಾ ಬೆಳ್ಳಿ ಗೆದ್ದಿದ್ದಕ್ಕೆ ಏನಂದ್ರು ತಂದೆ-ತಾಯಿ..!

---Advertisement---

 

 

ಪ್ಯಾರೀಸ್ ಒಲಂಪಿಕ್ ನಲ್ಲಿ ಭಾರತಕ್ಕೆ 5ನೇ‌ ಪದಕ ಲಭಿಸಿದೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಚಿನ್ನದ ಪದಕದ ಕಡೆಗೆ ಗಮನ ನೀಡಿದ್ದರು. ಆದರೆ ಈ ಬಾರಿ ಮಿಸ್ ಆಗಿದೆ. ಪಾಕಿಸ್ತಾನಿ ಅಥ್ಲಿಟ್ ಅರ್ಷದ್ ನದೀಮ್ ಚಿನ್ನದ ಪದಕ ಗೆದ್ದಿದ್ದಾರೆ. ಅಂದ ಹಾಗೇ ನೀರಜ್ ಚೋಪ್ರಾ ಹಾಗೂ ನದೀಮ್ ನಡುವೆ 2016ರಿಂದಾನೂ ಪೈಪೋಟಿ ನಡೆಯುತ್ತಿದೆ. 2022ರಲ್ಲೂ ನದೀಮ್ ಅವರನ್ನು ಸೋಲಿಸಿದ್ದರು. ಆದರೆ ಈ ಬಾರಿ, ನದೀಮ್ ಚಿನ್ನದ ಪದಕ ಗೆದ್ದು ಬಿಟ್ಟಿದ್ದಾರೆ.

ಈ ಬಗ್ಗೆ ನೀರಜ್ ಚೋಪ್ರಾ ತಂದೆ ಸತೀಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿಯೊಬ್ಬರಿಗೂ ಒಂದು ದಿನವಿದೆ. ಇಂದು ಪಾಕಿಸ್ತಾನದ ದಿನ. ಆದರೆ ನಾವೂ ಬೆಳ್ಳಿ ಪದಕ ಗೆದ್ದಿರುವುದು ಹೆಮ್ಮೆ ತಂದಿದೆ. ಮಗನಿಗೆ ಮೊದಲೇ ಗಾಯವಾಗಿತ್ತು. ಆ ಗಾಯದಿಂದ ಚಿನ್ನ ಗೆಲ್ಲಲು ಹಿನ್ನಡೆಯಾಗಿರಬಹುದು. ನಮಗೆ ತುಂಬಾ ಖುಷಿಯಾಗುತ್ತಿದೆ. ನಮಗೆ ಬೆಳ್ಳಿಯೂ ಬಂಗಾರಕ್ಕೆ ಸಮಾನ ಎಂದಿದ್ದಾರೆ.

ಇನ್ನು ನೀರಜ್ ಚೋಪ್ರಾ ತಾಯಿ ಸರೋಜಾ ದೇವಿ ಮಾತನಾಡಿ, ನಾವೂ ಬೆಳ್ಳಿಯಿಂದ ಸಂತೋಷವಾಗಿದ್ದೇವೆ. ಚಿನ್ನ ಪಡೆದವನು ಕೂಡ ನಮ್ಮ ಮಗನೆ ಎಂದಿದ್ದಾರೆ. ನೀರಜ್ ಚೋಪ್ರಾ ಭಾರತಕ್ಕೆ ಚಿನ್ನ ತರಲೆಂದು ಸತತ ಎರಡು ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದಾರೆ. ಫಿನ್ ಲ್ಯಾಂಡ್ ಹಾಗೂ ಜರ್ಮನಿಯಲ್ಲೂ ತಯಾರಿ ನಡೆಸಿದ್ದರು. ಆದರೆ ಕಡೆ ಗಳಿಗೆಯಲ್ಲಿ ಚಿನ್ನ ಮಿಸ್ ಆಗಿದೆ. ಬೆಳ್ಳಿ ಬಂದಿದ್ದಕ್ಕೆ ಮನೆಯವರೆಲ್ಲ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನು ಪಾಕಿಸ್ತಾನ ಈ ಬಾರಿಯ ಒಲಂಪಿಕ್ಸ್ ನಲ್ಲಿ ಮೊದಲ ಚಿನ್ನವನ್ನು ಗೆದ್ದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...