Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯ ಬಹು ಮುಖ್ಯ ಬೇಡಿಕೆ ತಿರಸ್ಕಾರ ಮಾಡಿದ ಕೇಂದ್ರ ಸರ್ಕಾರ : ಜಿಲ್ಲೆಯ ಜನತೆಗೆ ಬೇಸರ..!

Facebook
Twitter
Telegram
WhatsApp

 

ನವದೆಹಲಿ: ದಾವಣಗೆರೆ ಬೆಣ್ಣೆ ದೋಸೆಯನ್ನ ಯಾರು ತಿಂದಿಲ್ಲ ಹೇಳಿ. ಎಲ್ಲರೂ ಕೂಡ ಟೇಸ್ಟ್ ಮಾಡೋಣಾ‌ ಅಂತ ನೋಡಿ, ಆಮೇಲೆ ನಾಲಿಗೆಗೆ ರುಚಿ ಹತ್ತಿ ಅದನ್ನೇ ತಿನ್ನುತ್ತಿರುವವರು ಜಾಸ್ತಿ. ದೋಸೆ ಮೇಲೊಂದಿಷ್ಟು ಬೆಣ್ಣೆ, ಗಟ್ಟಿ ಚಟ್ನಿ ಆಹಾ ಅದರ ಟೇಸ್ಡು.. ಅದರ ಘಮಲು ನೆನೆಸಿಕೊಂಡರೇನೆ ಮೂಗಿಗೆ ಹೊಡೆಯುತ್ತೆ. ಅಷ್ಟು ಇಷ್ಟ ಎಲ್ಲರಿಗೂ. ಶತ ಶತಮಾನಗಳಿಂದಾನೂ ದಾವಣಗೆರೆ ಬೆಣ್ಣೆ ದೋಸೆ ಎಲ್ಲೆಡೆ ಫೇಮಸ್ ಆಗಿದೆ. ಈ ದೋಸೆ‌ಫೇಮಸ್ ಆದ ಕಾರಣ ದಾವಣಗೆರೆ ಮಂದಿ ಕೇಂದ್ರ ಸರ್ಕಾರದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದರು. ದಾವಣಗೆರೆ ಬೆಣ್ಣೆ ದೋಸೆ‌ನಗರಿ ಎಂಬ ಭೌಗೋಳಿಕ ಸೂಚ್ಯಂಕ ನೀಡಲು ಬೇಡಿಕೆ ಇಟ್ಟಿದ್ದರು. ಆದರೆ ಕೇಂದ್ರ ಸರ್ಕಾರ ಇದನ್ನು ತಿರಸ್ಕಾರ ಮಾಡಿದೆ. ಇದು ದಾವಣಗೆರೆ ಮಂದಿಗೆ ಬೇಸರ ಮಾಡಿದೆ.

ಕೇಂದ್ರ ಸರ್ಕಾರ ಇದಕ್ಕೆ ನೀಡಿರುವ ಕಾರಣ ದಾವಣಗೆರೆ ಬೆಣ್ಣೆ ದೋಸೆ ಅನ್ನೋದು ಕೇವಲ‌ ಒಂದು ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಅದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಕೂಡ ರೂಢಿಯಲ್ಲಿದೆ. ವಿವಿಧ ಜಿಲ್ಲೆಗಳಲ್ಲಿ ಈ ದೋಸೆಯನ್ನು ತಯಾರು ಮಾಡುತ್ತಾರೆ. ದಾವಣಗೆರೆ ಮಾತ್ರ ಸೇರುವುದಿಲ್ಲ. ಹೀಗಾಗಿ ಇದಕ್ಕೆ ಜಿಯಾಗ್ರಾಫಿಕಲ್ ಟ್ಯಾಗ್ ಎಂದು ದಾವಣಗೆರೆಗೆ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ರಾಜಗಯ ಸಚಿವ ಜಿತಿನ್ ಪ್ರಸಾದ್ ಉತ್ತರ ನೀಡಿದ್ದಾರೆ.

ದಾವಣಗೆರೆಯ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರಿಂದ ಕೇಂದ್ರ ಸರ್ಕಾರಕ್ಕೆ ಈ ಬೇಡಿಕೆ ಇಡಲಾಗಿತ್ತು. ಈ ಬಗ್ಗೆ ಪ್ರಭಾ ಮಲ್ಲಿಕಾರ್ಜುನ ಮಾತನಾಡು, ಈಗಾಗಲೇ ದಾವಣಗೆರೆಯ ಉಪ ಆಯುಕ್ತರಿಗೆ ಬೌಗೋಳಿಕ ಸೂಚ್ಯಂಕದ ನೋಂದಣಿ ಇಲಾಖೆಗೆ ಒಂದು ಅರ್ಜಿ ಸಲ್ಲಿಸಲು ಹೇಳಿದ್ದೇನೆ. ಈಗಾಗಲೇ ದೇಶದ ಎಲ್ಲಾ ಕಡೆ ಮಾರಾಟವಾಗುವ ರಸಗುಲ್ಲಾ, ಚಿಕ್ಕಿಗಳು ಒಂದೊಂದು ನಗರಕ್ಕೆ ಭೌಗೋಳಿಕ ಸೂಚ್ಯಂಕವಾಗಿ ಗುರುತಿಸಿಕೊಂಡಿವೆ. ಅದೇ ರೀತಿ ಬೆಣ್ಣೆ ದೋಸೆ ಕೂಡ. ಬೇರೆ ಕಡೆಯಲ್ಲೆಲ್ಲಾ ತಯಾರಾಗುತ್ತದೆ ಎಂಬ ಕಾರಣಕ್ಕೆ ಜಿಐ ಟ್ಯಾಗ್ ಕೊಡಲ್ಲ ಎಂದು ಹೇಳುವುದು ಸರಿಯಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!