Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನವಿಡೀ ಬಿಸಿ ನೀರು ಕುಡಿದ್ರೆ ಈ ಕಾಯಿಲೆ ಬರೋದು ಗ್ಯಾರಂಟಿ..!

Facebook
Twitter
Telegram
WhatsApp

 

ಮನುಷ್ಯ ದಿನದಲ್ಲಿ ಎರಡ್ಮೂರು ಲೀಟರ್ ನೀರು ಕುಡೊಯಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಅದೆಷ್ಟೋ ಜನ ಒಂದು ಲೀಟರ್ ನಷ್ಟು ನೀರನ್ನು ಕುಡಿಯುವುದಿಲ್ಲ. ಈಗಂತು ಮಳೆಯಿಂದಾಗಿ ಚಳಿಯ ವಾತಾವರಣ ಇರುವ ಕಾರಣ ಬಾಯಾರಿಕೆ ಆಗುವುದೇ ಇಲ್ಲ. ಹಲವರು ಬಿಸಿ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆದರೂ ನೀರು ಕುಡಿಯುವುದು ಕಡಿಮೆಯೇ ಸರಿ. ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವುದರಿಂದ ಗ್ಯಾಸ್ಟ್ರಿಕ್‌ ಸಮಸ್ಯೆ ಸೇರಿದಂತೆ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು ಎಂದೇ ಹೇಳುತ್ತಾರೆ. ಆದರೆ ದಿನವಿಡೀ ಬಿಸಿ‌ನೀರು ಕುಡಿಯುವವರು ಆರೋಗ್ಯದ ಕಡೆ ಗಮನ ಕೊಡಬೇಕಾಗುತ್ತದೆ. ಅದರಿಂದ ಏನೆಲ್ಲಾ ಸಮಸ್ಯೆಗಳು ಬರುತ್ತವೆ ಗೊತ್ತಾ..?

 

* ಕೆಲವೊಬ್ಬರು ಬಿಸಿ‌ನೀರನ್ನು ಹೆಚ್ಚಾಗಿ ಕುಡಿಯುವುದರಿಂದ ಯಕೃತ್ತಿನ ಸಮಸ್ಯೆ ಉಂಟಾಗುತ್ತದೆ ಎಂದೇ ಭಾವಿಸುತ್ತಾರೆ. ಹೀಗಾಗಿ ಹೆಚ್ಚಿನ ಜನ ದಿನವಿಡೀ ಬಿಸಿ ನೀರು ಕುಡಿಯುವುದಿಲ್ಲ.

* ಬಿಸಿ ನೀರು ಹೆಚ್ಚಾಗಿ ಸೇವಿಸುವ ಕಾರಣ ಚರ್ಮದ ತ್ವಜೆ ಡಲ್ ಆಗುವ ಸಾಧ್ಯತೆ ಇರುತ್ತದೆ. ಹೆಚ್ಚು ಬಿಸಿ ಇರುವ ನೀರನ್ನು ಕುಡಿಯುವುದರಿಂದ ದೇಹ ಬೆವರುವುದಕ್ಕೆ ಕಾರಣವಾಗುತ್ತದೆ. ತುರಿಕೆ, ಚರ್ಮ ಸಂಬಂಧಿತ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ.

* ಬಿಸಿನೀರಿನಿಂದ ನಿಮ್ಮ ನಿದ್ರೆಗೆ ತೊಂದರೆಯಾಗಲಿದೆ. ಅತಿಯಾದ ಬಿಸಿನೀರಿನ ಸೇವನೆ ನಿದ್ದೆ ಬರಿಸದಂತೆ ಮಾಡಿಬಿಡುತ್ತದೆ.

* ನೀರು ಕುಡಿಯುವುದು ಆರೋಗ್ಯಕರವಾಗಿದ್ದು ಅದು ದೇಹವನ್ನು ಹೈಡ್ರೇಟ್ ಮಾಡುತ್ತದೆ ಎನ್ನುವುದು ನಿಜ. ಆದರೆ ನಿಮಗೆ ಬಾಯಾರಿಕೆ ಇಲ್ಲದಿರುವಾಗಲೂ ಆಗಾಗ್ಗೆ ಬಿಸಿನೀರನ್ನು ಕುಡಿಯುವುದರಿಂದ ದೇಹದಲ್ಲಿನ ನೀರಿನ ಸಾಂದ್ರತೆಯಲ್ಲಿ ಅಸಮತೋಲನವನ್ನು ಉಂಟುಮಾಡಬಹುದು, ಇದರಿಂದಾಗಿ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ.

ಬಿಸಿನೀರು ಕುಡಿಯುವುದರಿಂದ ಲಾಭಗಳು ಸಹ ಇದಾವೆ. ಅತಿಯಾಗಬಾರದು ಅಷ್ಟೇ. ಈಗಂತೂ ಮಳೆಗಾಲ ಆಗಿರುವ ಕಾರಣ ಹಲವರಲ್ಲಿ ಶೀತ, ನೆಗಡಿ ಸರ್ವೇ ಸಾಮಾನ್ಯ. ತಣ್ಣಗಿನ ನೀರು ಕುಡಿಯುವುದರಿಂದ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದರೆ ಬೆಚ್ಚಗಿನ ನೀರು ಕುಡಿಯುವುದರಿಂದ ಶೀತವನ್ನು ಕಡಿಮೆ ಮಾಡಿಕೊಳ್ಳಬಹುದು. ಈ ಸಮಯದಲ್ಲಿ ದೇಹ ಉಷ್ಣತೆಯಿಂದ ಕೂಡಿರಬೇಕು. ಹೀಗಾಗಿ ಬಿಸಿನೀರು ಅದನ್ನು ಹೆಚ್ಚಿಸುತ್ತದೆ.
(ಈ ಎಲ್ಲಾ ಮಾಹಿತಿಯನ್ನು ಗೂಗಲ್ ನಲ್ಲಿ ರೆಫರೆನ್ಸ್ ಮಾಡಿ ಬರೆದಿರುವ ಕಾರಣ ವೆಬ್ಸೈಟ್ ಜವಬ್ದಾರಿಯಲ್ಲ)

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!